2:55 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ವಿಜಯಪುರ: ಜೋಡೆತ್ತುಗಳಿಂದ ಮುಖ್ಯಮಂತ್ರಿ ಬೊಮ್ಮಾಯಿಯ ತಿವಿಯಲು ಯತ್ನ; ಇದಕ್ಕೆಲ್ಲ ಕಾರಣ ಏನು ಗೊತ್ತೇ?

26/04/2022, 16:29

ವಿಜಯಪುರ(reporterkarnataka.com):  ಜನಜಂಗುಳಿಯ ಗದ್ದಲದಿಂದ ಬೆದರಿದ ಜೋಡೆತ್ತುಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತಿವಿಯಲು ಯತ್ನಿಸಿದ ಘಟನೆ ವಿಜಯಪುರದ ತಾಳಿಕೋಟೆಯ ಬಂಟನೂರಲ್ಲಿ ನಡೆದಿದೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಬಂಟನೂರು ಸಮೀಪದ ಬೂದಿಹಾಳ ಪೀರಾಪುರ ಏತ ನೀರಾವರಿ ಯೋಜನೆ ಶಂಕು ಸ್ಥಾಪನೆಗೆ ಆಗಮಿಸಿದ್ದರು. ಬಳಿಕ ಸಿಎಂ ಅವರು ಬಂಟನೂರು ಗ್ರಾಮದ ರೈತರಿಂದ ಜೋಡೆತ್ತು ಹಾಗೂ ಹಸು ಕಾಣಿಕೆ ಕಾರ್ಯಕ್ರಮದಲ್ಲಿ ಜೋಡೆತ್ತುವನ್ನು ಕಾಣಿಕೆ ನೀಡುವ ಕಾರ್ಯಕ್ರಮವಿತ್ತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಜೋಡೆತ್ತುವನ್ನು ನೋಡಲು ಹೋದಾಗ ಜನಜಂಗುಳಿ ಮತ್ತು ಗದ್ದಲದಿಂದ ಗಾಬರಿಗೊಂಡು ಬೊಮ್ಮಾಯಿ ಅವರನ್ನು ತಿವಿಯಲು ಮುಂದಾಯಿತು. ಸ್ಥಳದಲ್ಲೇ ಇದ್ದ ರೈತ ಎ. ಎಸ್. ಪಿ. ರಾಮ್ ಅರಸಿದ್ದಿ ಎಂಬುವವರು ತಕ್ಷಣ ಎತ್ತಿನ ಕೊಂಬನ್ನು ಹಿಡಿದು ಹಿಂದಕ್ಕೆ ಎಳೆದು ಮುಖ್ಯಮಂತ್ರಿಯವರನ್ನು ಪಾರು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು