1:39 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ರಾಜಧಾನಿ ದೆಹಲಿಯಲ್ಲಿ 46 ಡಿಗ್ರಿ ಸೆಲ್ಸಿಯಸ್ ತಾಪಮಾನ: ಸುಡು ಬಿಸಿಲಿಗೆ ಜನರು ತತ್ತರ; ಯೆಲ್ಲೋ ಅಲರ್ಟ್ 

28/04/2022, 11:25

ಹೊಸದಿಲ್ಲಿ :(reporterkarnataka.com): ರಣಬಿಸಿಲ ಧಗೆಗೆ ರಾಷ್ಟ್ರ ರಾಜಧಾನಿ ದೆಹಲಿ ತತ್ತರಿಸಿ ಹೋಗಿದ್ದು, ಬುಧವಾರ ದೆಹಲಿಯಲ್ಲಿ ಬರೊಬ್ಬರಿ 46 ಡಿಗ್ರಿ ತಾಪಮಾನ ದಾಖಲಾಗಿದೆ. ಆ ಮೂಲಕ ದೆಹಲಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದೆಹಲಿಯ ಸಫ್ದರ್‌ಜಂಗ್ ವೀಕ್ಷಣಾಲಯವು ಮಂಗಳವಾರ ಗರಿಷ್ಠ 40.8 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ದಾಖಲಿಸಿತ್ತು. ಇದು ಬುಧವಾರದಂದು 42 ಡಿಗ್ರಿ ಮಾರ್ಕ್ ಅನ್ನು ಮೀರುವ ನಿರೀಕ್ಷೆಯಿದೆ ಮತ್ತು ಗುರುವಾರದ ವೇಳೆಗೆ 44 ಡಿಗ್ರಿ ಸೆಲ್ಸಿಯಸ್‌ಗೆ ಏರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ದೆಹಲಿಯ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 46 ಡಿಗ್ರಿ ಸೆಲ್ಸಿಯಸ್‌ಗೆ ಏರಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಹಿಂದೆ ಏಪ್ರಿಲ್ 21, 2017 ರಂದು ರಾಜಧಾನಿಯಲ್ಲಿ ಗರಿಷ್ಠ ತಾಪಮಾನ 43.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಅಂತೆಯೇ ಏಪ್ರಿಲ್ 29, 1941 ರಂದು ತಿಂಗಳ ಸಾರ್ವಕಾಲಿಕ ಗರಿಷ್ಠ ತಾಪಮಾನವು 45.6 ಡಿಗ್ರಿ ಸೆಲ್ಸಿಯಸ್ ಆಗಿತ್ತು.

ಭಾರತೀಯ ಹವಾಮಾನ ಇಲಾಖೆ (IMD) ಹವಾಮಾನ ಇಲಾಖೆ ದೆಹಲಿಯಲ್ಲಿ ಇದೀಗ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ತಾಪಮಾನಕ್ಕೆ ಸಂಬಂಧಿಸಿದಂತೆ ಕ್ರಮಕ್ಕೆ ಸೂಚಿಸಿದೆ. ಶಾಖದ ಅಲೆಯು ಪೀಡಿತ ಪ್ರದೇಶಗಳಲ್ಲಿ ದುರ್ಬಲ ಜನರಿಗೆ – ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ “ಮಧ್ಯಮ” ಆರೋಗ್ಯ ಕಾಳಜಿ ವಹಿಸಬೇಕು. ಎಲ್ಲೋ ಅಲರ್ಟ್ ಘೋಷಿತ ಪ್ರದೇಶಗಳಲ್ಲಿ ಜನರು ಶಾಖಕ್ಕೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು, ಹಗುರವಾದ, ತಿಳಿ ಬಣ್ಣದ, ಸಡಿಲವಾದ, ಹತ್ತಿ ಬಟ್ಟೆಗಳನ್ನು ಧರಿಸಬೇಕು ಮತ್ತು ಬಟ್ಟೆ, ಟೋಪಿ ಅಥವಾ ಛತ್ರಿ ಇತ್ಯಾದಿಗಳನ್ನು ಬಳಸಿ ತಲೆಯನ್ನು ಮುಚ್ಚಬೇಕು ಎಂದು ಐಎಂಡಿ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು