11:45 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಜಧಾನಿ ದೆಹಲಿಯಲ್ಲಿ 46 ಡಿಗ್ರಿ ಸೆಲ್ಸಿಯಸ್ ತಾಪಮಾನ: ಸುಡು ಬಿಸಿಲಿಗೆ ಜನರು ತತ್ತರ; ಯೆಲ್ಲೋ ಅಲರ್ಟ್ 

28/04/2022, 11:25

ಹೊಸದಿಲ್ಲಿ :(reporterkarnataka.com): ರಣಬಿಸಿಲ ಧಗೆಗೆ ರಾಷ್ಟ್ರ ರಾಜಧಾನಿ ದೆಹಲಿ ತತ್ತರಿಸಿ ಹೋಗಿದ್ದು, ಬುಧವಾರ ದೆಹಲಿಯಲ್ಲಿ ಬರೊಬ್ಬರಿ 46 ಡಿಗ್ರಿ ತಾಪಮಾನ ದಾಖಲಾಗಿದೆ. ಆ ಮೂಲಕ ದೆಹಲಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದೆಹಲಿಯ ಸಫ್ದರ್‌ಜಂಗ್ ವೀಕ್ಷಣಾಲಯವು ಮಂಗಳವಾರ ಗರಿಷ್ಠ 40.8 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ದಾಖಲಿಸಿತ್ತು. ಇದು ಬುಧವಾರದಂದು 42 ಡಿಗ್ರಿ ಮಾರ್ಕ್ ಅನ್ನು ಮೀರುವ ನಿರೀಕ್ಷೆಯಿದೆ ಮತ್ತು ಗುರುವಾರದ ವೇಳೆಗೆ 44 ಡಿಗ್ರಿ ಸೆಲ್ಸಿಯಸ್‌ಗೆ ಏರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ದೆಹಲಿಯ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 46 ಡಿಗ್ರಿ ಸೆಲ್ಸಿಯಸ್‌ಗೆ ಏರಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಹಿಂದೆ ಏಪ್ರಿಲ್ 21, 2017 ರಂದು ರಾಜಧಾನಿಯಲ್ಲಿ ಗರಿಷ್ಠ ತಾಪಮಾನ 43.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಅಂತೆಯೇ ಏಪ್ರಿಲ್ 29, 1941 ರಂದು ತಿಂಗಳ ಸಾರ್ವಕಾಲಿಕ ಗರಿಷ್ಠ ತಾಪಮಾನವು 45.6 ಡಿಗ್ರಿ ಸೆಲ್ಸಿಯಸ್ ಆಗಿತ್ತು.

ಭಾರತೀಯ ಹವಾಮಾನ ಇಲಾಖೆ (IMD) ಹವಾಮಾನ ಇಲಾಖೆ ದೆಹಲಿಯಲ್ಲಿ ಇದೀಗ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ತಾಪಮಾನಕ್ಕೆ ಸಂಬಂಧಿಸಿದಂತೆ ಕ್ರಮಕ್ಕೆ ಸೂಚಿಸಿದೆ. ಶಾಖದ ಅಲೆಯು ಪೀಡಿತ ಪ್ರದೇಶಗಳಲ್ಲಿ ದುರ್ಬಲ ಜನರಿಗೆ – ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ “ಮಧ್ಯಮ” ಆರೋಗ್ಯ ಕಾಳಜಿ ವಹಿಸಬೇಕು. ಎಲ್ಲೋ ಅಲರ್ಟ್ ಘೋಷಿತ ಪ್ರದೇಶಗಳಲ್ಲಿ ಜನರು ಶಾಖಕ್ಕೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು, ಹಗುರವಾದ, ತಿಳಿ ಬಣ್ಣದ, ಸಡಿಲವಾದ, ಹತ್ತಿ ಬಟ್ಟೆಗಳನ್ನು ಧರಿಸಬೇಕು ಮತ್ತು ಬಟ್ಟೆ, ಟೋಪಿ ಅಥವಾ ಛತ್ರಿ ಇತ್ಯಾದಿಗಳನ್ನು ಬಳಸಿ ತಲೆಯನ್ನು ಮುಚ್ಚಬೇಕು ಎಂದು ಐಎಂಡಿ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು