7:26 PM Sunday21 - September 2025
ಬ್ರೇಕಿಂಗ್ ನ್ಯೂಸ್
ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ…

ಇತ್ತೀಚಿನ ಸುದ್ದಿ

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಎಸ್ ಡಿಎ ಜ್ಯೋತಿ ಪಾಟೀಲ್‌ ಸೆರೆ; ಬಂಧಿತರ ಸಂಖ್ಯೆ 17ಕ್ಕೆ ಏರಿಕೆ

28/04/2022, 22:28

ಬೆಂಗಳೂರು(reporterkarnataka.com): ಪಿಎಸ್‌ಐ ಹುದ್ದೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಜ್ಯೋತಿ ಪಾಟೀಲ್‌ ಅವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 17ಕ್ಕೆ ಏರಿದೆ.

ಅಭ್ಯರ್ಥಿ ಹಾಗೂ ಕಿಂಗ್‌ ಪಿನ್‌ ಜೊತೆ ಡೀಲ್‌ ಮಾಡಿಸಿದ್ದ ಆರೋಪ ಜ್ಯೋತಿ ಮೇಲಿದ್ದು, ಅಭ್ಯರ್ಥಿ ಶಾಂತಿಬಾಯಿಯನ್ನ ಮೇಳಕುಂದಿಗೆ ಪರಿಚಯಿಸಿದ್ದರು. ಅದರಂತೆ ಶಾಂತಿಬಾಯಿ ಪಿಎಸ್‌ಐ ಪರೀಕ್ಷೆ ಬರೆದು ಆಯ್ಕೆಯಾಗಿದ್ದಾಳೆ. ಸದ್ಯ ಆರೋಪಿ ಶಾಂತಿಬಾಯಿ ತಲೆಮೆರೆಸಿಕೊಂಡಿದ್ದಾರೆ. ಇನ್ನು ಬಂಧಿತ ಜ್ಯೋತಿ, ಶಹಬಾದ್‌ ನಗರಸಭೆಯಲ್ಲಿ ಎಸ್‌ಡಿಎ ಆಗಿದ್ದು, ಬೆಂಗಳೂರಿನ ಆರ್‌ಡಿಪಿಆರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದಷ್ಟೇ ಶಹಬಾದ್‌ ನಗರಸಭೆಗೆ ವರ್ಗಾವಣೆಗೊಂಡಿದ್ದು, ವರ್ಗಾವಣೆ ಬಳಿಕ ಕಲಬುರಗಿಲ್ಲಿಯೇ ಜ್ಯೋತಿ ವಾಸವಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು