3:32 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್, ಮಂಗಳೂರು ಲೀಜನಿನ 2022 – 23ನೇ ಸಾಲಿನ ಪದಗ್ರಹಣ

29/04/2022, 00:26

ಮಂಗಳೂರು( reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್, ಮಂಗಳೂರು ಲೀಜನಿನ 2022 – 23ನೇ ಸಾಲಿನ ಪದಗ್ರಹಣ ಸಮಾರಂಭ ನಗರದ ಹೋಟೆಲ್ ಮಾಯಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ಜರುಗಿತು.

2022-23ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಿಶೋರ್ ಫೆರ್ನಾಂಡಿಸ್, ಕಾರ್ಯದರ್ಶಿಯಾಗಿ ಫ್ಲೇವಿ ಡಿ ಮೆಲ್ಲೋ, ಜತೆ ಕಾರ್ಯದರ್ಶಿ ಹಾಗೂ ಪಿಆರ್ ಒ ಆಗಿ ಲತಾ ಕಲ್ಲಡ್ಕ ಹಾಗೂ ಖಜಾಂಚಿಯಾಗಿ ಶಾಲಿನಿ ಪಿ. ಸುವರ್ಣ,ಸೀನಿಯರೇಟ್ ಅಧ್ಯಕ್ಷೆಯಾಗಿ ನಿರ್ಮಲಾ ಪ್ರಮೋದ್ , ಸೀನಿಯರೇಟ್ ಕಾರ್ಯದರ್ಶಿಯಾಗಿ ಮಾಲತಿ ಶೆಟ್ಟಿ ಅವರು ಅಧಿಕಾರ ಸ್ವೀಕರಿಸಿದರು.

ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕಿಶೋರ್ ಫೆರ್ನಾಂಡಿಸ್ ಅವರಿಗೆ ಕಳೆದ ಸಾಲಿನ ಅಧ್ಯಕ್ಷರಾದ ರಾಷ್ಟೀಯ ಪ್ರಶಸ್ತಿ ವಿಜೇತರಾದ ಹರಿಪ್ರಸಾದ್ ಅವರು ಪ್ರಮಾಣ ವಚನ ಬೋಧಿಸಿದರು. ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅಂತಾರಾಷ್ಟ್ರೀಯ ಸೀನಿಯರ್ ಚೇಂಬರ್ ಅಧ್ಯಕ್ಷರಾದ ಡಾ.ಅರವಿಂದ ರಾವ್ ಕೇದಿಗೆ ಉಪಸ್ಥಿತರಿದ್ದು ಶುಭ ಹಾರೈಸಿದರು. ಅತಿಥಿಗಳಾಗಿ ಭಾರತೀಯ ಜೂನಿಯರ್ ಚೇಂಬರಿನ ಜನರಲ್ ಲೀಗಲ್ ಕೌನ್ಸಿಲರ್, ಜೇಸಿ ಸೆನೆಟರ್ ಸೌಜನ್ಯ ಹೆಗ್ಡೆ, ಭಾರತೀಯ ಭೂಸೇನೆಯ ನಿವೃತ್ತ ಹಿರಿಯ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಜಗದೀಶ್ ಹೆಬ್ರಿ, ಅಂತಾರಾಷ್ಟ್ರೀಯ ಸೀನಿಯರ್ ಚೇಂಬರಿನ ನಿರ್ದೇಶಕರಾದ ಚಿತ್ರ ಕುಮಾರ್  ಅವರು ವೇದಿಕೆಯಲ್ಲಿದ್ದರು.


ಈ ಸಂದರ್ಭದಲ್ಲಿ 6 ಮಂದಿ ಹೊಸ ಸದಸ್ಯರು ಮಂಗಳೂರು ಲೀಜನಿಗೆ ಸೇರ್ಪಡೆಗೊಂಡರು. ಸದಸ್ಯರಾದ ಅಶೋಕ್ ಎಂ.ಕೆ. ಮತ್ತು ವಿಕಾಸ್ ಶೆಟ್ಟಿ ದೇಣಿಗೆಯಿತ್ತರು. ಅಧ್ಯಕ್ಷರಾದ ಹರಿಪ್ರಸಾದ್ ಅವರು ಸ್ವಾಗತಿಸಿ, ಹೊಸದಾಗಿ ಆಯ್ಕೆಯಾದ ಕಾರ್ಯದರ್ಶಿ ಫ್ಲೇವಿ ಡಿಮೆಲ್ಲೊರವರು ವಂದಿಸಿದರು.

ಪ್ರೀತಿ ರೈ, ಶಾಲಿನಿ ಪ್ರಶಾಂತ್, ಸುರೇಶ್ ಎಂ.ಎಸ್.,ಲತಾ ಕಲ್ಲಡ್ಕ, ದತ್ತಾತ್ರೇಯ ಬಿ., ಫ್ಲೇವಿ ಡಿಮೆಲ್ಲೊ ವಿವಿಧ ಜವಾಬ್ದಾರಿ ನಿರ್ವಹಿಸಿದರು.ಉಡುಪಿ ಟೆಂಪಲ್ ಸಿಟಿ ಲೀಜನ್, ಬಂಟ್ವಾಳ ನೇತ್ರಾವತಿ ಸಂಗಮ ಲೀಜನ್, ಉಳ್ಳಾಲ ರಾಣಿ ಅಬ್ಬಕ್ಕ ಲೀಜನ್, ಮಂಗಳೂರು ಜೇಸಿಸ್ ಮತ್ತಿತರ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು