12:48 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಬಿಜೆಪಿ ಹೈಕಮಾಂಡ್ ನ ತೀರ್ಮಾನ ಏನು?: ರಾಜ್ಯ ಸಂಪುಟ ಪುನಾರಚನೆಯೇ? ಮುಖ್ಯಮಂತ್ರಿ ಬದಲಾವಣೆಯೇ?

30/04/2022, 18:25

ಬೆಂಗಳೂರು(reporterkarnataka.com): ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ರಾಜ್ಯ ಬೊಮ್ಮಾಯಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗುತ್ತಿತ್ತು. ಆದರೆ ಆಪರೇಶನ್ ಕಮಲದ ಮೂಲಕ ಅಸ್ತಿತ್ವಕ್ಕೆ ಬಂದ ರಾಜ್ಯ ಬಿಜೆಪಿ ಸರಕಾರದಲ್ಲಿ ಸಂಪುಟ ವಿಸ್ತರಣೆಗೆ ಕೈ ಹಾಕುವುದೆಂದರೆ ಜೇನುಗೂಡಿಗೆ ಕೈ ಹಾಕಿದ್ದಂತೇ ಸರಿ. ಇದೆಲ್ಲವನ್ನು ಅರಿತೇ ಸಂಪುಟ ಪುನಾರಚನೆಯ ಬಗ್ಗೆ ಪಕ್ಷದ ಹೈಕಮಾಂಡ್ ಇದುವರೆಗೆ ತೀರ್ಮಾನ ಕೈಗೊಂಡಿಲ್ಲ.

ಯುಗಾದಿ ಬೆನ್ನಲ್ಲೇ ರಾಜ್ಯ ಸಂಪುಟ ಪುನಾರಚನೆ ಎನ್ನಲಾಗಿತ್ತು. ಇದೀಗ ಏಪ್ರಿಲ್ ತಿಂಗಳ 1ನೇ, 2ನೇ, 3ನೇ ವಾರ ಕಳೆದು 4ನೇ ವಾರವೂ ಮುಗಿದು ಹೋಯಿತು. ಆದರೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲೇ ಇಲ್ಲ. ರಾಜ್ಯ ಸಂಪುಟದಲ್ಲಿ ಇದೀಗ 5 ಸ್ಥಾನಗಳು ಖಾಲಿ ಇವೆ. ಇನ್ನು 4 ಮಂದಿಯನ್ನು ಕೈಬಿಟ್ಟರೆ 9 ಮಂದಿಯನ್ನು ಸಂಪುಟಕ್ಕೆ ತೆಗೆದುಕೊಳ್ಳಲು ಸಾಧ್ಯವಿದೆ. ಆದರೆ ಮೂಲ ಬಿಜೆಪಿಗರು ಹಾಗೂ ವಲಸೆ ಬಿಜೆಪಿಗರ ಮಧ್ಯೆ ಶೀತಲ ಸಮರ ನಡೆಯುತ್ತಲೇ ಇದೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸ್ವಲ್ಪ ಎಡವಿದರೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಆಗಲಿದೆ. ಇದನ್ನೆಲ್ಲ ಮನಗಂಡೇ ಬಿಜೆಪಿ ಹೈಕಮಾಂಡ್ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಹಿಂದೇಟು ಹಾಕುತ್ತಿದೆ.

ಪಕ್ಷದ ಇನ್ನೊಂದು ಮೂಲಗಳ ಪ್ರಕಾರ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆಯೊಲ್ಲ. ಬದಲಿಗೆ ಮುಖ್ಯಮಂತ್ರಿಯ ಬದಲಾವಣೆ ಕುರಿತು ಪಕ್ಷದ ಹೈಕಮಾಂಡ್ ಚಿಂತಿಸುತ್ತಿದೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೋಲಿಸಿದರೆ ಬೊಮ್ಮಾಯಿ ಅವರ ಪ್ರಭಾವ ಏನೂ ಸಾಲದು ಎನ್ನುವ ತೀರ್ಮಾನಕ್ಕೆ ಕೇಸರಿ ವರಿಷ್ಠರು ಬಂದಿದ್ದಾರೆ ಎನ್ನಲಾಗಿದೆ. ಪಕ್ಷದ ಅಧ್ಯಕ್ಷ ಸ್ಥಾನವನ್ನು ಲಿಂಗಾಯಿತ ಸಮುದಾಯಕ್ಕೆ ನೀಡಿ, ಮುಖ್ಯಮಂತ್ರಿ ಸ್ಥಾನವನ್ನು ಒಕ್ಕಲಿಗರಿಗೆ ಕೊಡುವ ಕುರಿತು ಕೂಡ ಚಿಂತನೆ ನಡೆದಿದೆ ಎನ್ನಲಾಗಿದೆ. ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಪ್ರಭಾವೀ ಒಕ್ಕಲಿಗ ನಾಯಕನಿಗೆ ಪಟ್ಟ ಕಟ್ಟುವ ಬಗ್ಗೆ ಚಿಂತನೆ ಆರಂಭವಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು