8:26 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಬಿಜೆಪಿ ಹೈಕಮಾಂಡ್ ನ ತೀರ್ಮಾನ ಏನು?: ರಾಜ್ಯ ಸಂಪುಟ ಪುನಾರಚನೆಯೇ? ಮುಖ್ಯಮಂತ್ರಿ ಬದಲಾವಣೆಯೇ?

30/04/2022, 18:25

ಬೆಂಗಳೂರು(reporterkarnataka.com): ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ರಾಜ್ಯ ಬೊಮ್ಮಾಯಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗುತ್ತಿತ್ತು. ಆದರೆ ಆಪರೇಶನ್ ಕಮಲದ ಮೂಲಕ ಅಸ್ತಿತ್ವಕ್ಕೆ ಬಂದ ರಾಜ್ಯ ಬಿಜೆಪಿ ಸರಕಾರದಲ್ಲಿ ಸಂಪುಟ ವಿಸ್ತರಣೆಗೆ ಕೈ ಹಾಕುವುದೆಂದರೆ ಜೇನುಗೂಡಿಗೆ ಕೈ ಹಾಕಿದ್ದಂತೇ ಸರಿ. ಇದೆಲ್ಲವನ್ನು ಅರಿತೇ ಸಂಪುಟ ಪುನಾರಚನೆಯ ಬಗ್ಗೆ ಪಕ್ಷದ ಹೈಕಮಾಂಡ್ ಇದುವರೆಗೆ ತೀರ್ಮಾನ ಕೈಗೊಂಡಿಲ್ಲ.

ಯುಗಾದಿ ಬೆನ್ನಲ್ಲೇ ರಾಜ್ಯ ಸಂಪುಟ ಪುನಾರಚನೆ ಎನ್ನಲಾಗಿತ್ತು. ಇದೀಗ ಏಪ್ರಿಲ್ ತಿಂಗಳ 1ನೇ, 2ನೇ, 3ನೇ ವಾರ ಕಳೆದು 4ನೇ ವಾರವೂ ಮುಗಿದು ಹೋಯಿತು. ಆದರೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲೇ ಇಲ್ಲ. ರಾಜ್ಯ ಸಂಪುಟದಲ್ಲಿ ಇದೀಗ 5 ಸ್ಥಾನಗಳು ಖಾಲಿ ಇವೆ. ಇನ್ನು 4 ಮಂದಿಯನ್ನು ಕೈಬಿಟ್ಟರೆ 9 ಮಂದಿಯನ್ನು ಸಂಪುಟಕ್ಕೆ ತೆಗೆದುಕೊಳ್ಳಲು ಸಾಧ್ಯವಿದೆ. ಆದರೆ ಮೂಲ ಬಿಜೆಪಿಗರು ಹಾಗೂ ವಲಸೆ ಬಿಜೆಪಿಗರ ಮಧ್ಯೆ ಶೀತಲ ಸಮರ ನಡೆಯುತ್ತಲೇ ಇದೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸ್ವಲ್ಪ ಎಡವಿದರೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಆಗಲಿದೆ. ಇದನ್ನೆಲ್ಲ ಮನಗಂಡೇ ಬಿಜೆಪಿ ಹೈಕಮಾಂಡ್ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಹಿಂದೇಟು ಹಾಕುತ್ತಿದೆ.

ಪಕ್ಷದ ಇನ್ನೊಂದು ಮೂಲಗಳ ಪ್ರಕಾರ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆಯೊಲ್ಲ. ಬದಲಿಗೆ ಮುಖ್ಯಮಂತ್ರಿಯ ಬದಲಾವಣೆ ಕುರಿತು ಪಕ್ಷದ ಹೈಕಮಾಂಡ್ ಚಿಂತಿಸುತ್ತಿದೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೋಲಿಸಿದರೆ ಬೊಮ್ಮಾಯಿ ಅವರ ಪ್ರಭಾವ ಏನೂ ಸಾಲದು ಎನ್ನುವ ತೀರ್ಮಾನಕ್ಕೆ ಕೇಸರಿ ವರಿಷ್ಠರು ಬಂದಿದ್ದಾರೆ ಎನ್ನಲಾಗಿದೆ. ಪಕ್ಷದ ಅಧ್ಯಕ್ಷ ಸ್ಥಾನವನ್ನು ಲಿಂಗಾಯಿತ ಸಮುದಾಯಕ್ಕೆ ನೀಡಿ, ಮುಖ್ಯಮಂತ್ರಿ ಸ್ಥಾನವನ್ನು ಒಕ್ಕಲಿಗರಿಗೆ ಕೊಡುವ ಕುರಿತು ಕೂಡ ಚಿಂತನೆ ನಡೆದಿದೆ ಎನ್ನಲಾಗಿದೆ. ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಪ್ರಭಾವೀ ಒಕ್ಕಲಿಗ ನಾಯಕನಿಗೆ ಪಟ್ಟ ಕಟ್ಟುವ ಬಗ್ಗೆ ಚಿಂತನೆ ಆರಂಭವಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು