12:11 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಿಜೆಪಿ ಹೈಕಮಾಂಡ್ ನ ತೀರ್ಮಾನ ಏನು?: ರಾಜ್ಯ ಸಂಪುಟ ಪುನಾರಚನೆಯೇ? ಮುಖ್ಯಮಂತ್ರಿ ಬದಲಾವಣೆಯೇ?

30/04/2022, 18:25

ಬೆಂಗಳೂರು(reporterkarnataka.com): ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ರಾಜ್ಯ ಬೊಮ್ಮಾಯಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗುತ್ತಿತ್ತು. ಆದರೆ ಆಪರೇಶನ್ ಕಮಲದ ಮೂಲಕ ಅಸ್ತಿತ್ವಕ್ಕೆ ಬಂದ ರಾಜ್ಯ ಬಿಜೆಪಿ ಸರಕಾರದಲ್ಲಿ ಸಂಪುಟ ವಿಸ್ತರಣೆಗೆ ಕೈ ಹಾಕುವುದೆಂದರೆ ಜೇನುಗೂಡಿಗೆ ಕೈ ಹಾಕಿದ್ದಂತೇ ಸರಿ. ಇದೆಲ್ಲವನ್ನು ಅರಿತೇ ಸಂಪುಟ ಪುನಾರಚನೆಯ ಬಗ್ಗೆ ಪಕ್ಷದ ಹೈಕಮಾಂಡ್ ಇದುವರೆಗೆ ತೀರ್ಮಾನ ಕೈಗೊಂಡಿಲ್ಲ.

ಯುಗಾದಿ ಬೆನ್ನಲ್ಲೇ ರಾಜ್ಯ ಸಂಪುಟ ಪುನಾರಚನೆ ಎನ್ನಲಾಗಿತ್ತು. ಇದೀಗ ಏಪ್ರಿಲ್ ತಿಂಗಳ 1ನೇ, 2ನೇ, 3ನೇ ವಾರ ಕಳೆದು 4ನೇ ವಾರವೂ ಮುಗಿದು ಹೋಯಿತು. ಆದರೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲೇ ಇಲ್ಲ. ರಾಜ್ಯ ಸಂಪುಟದಲ್ಲಿ ಇದೀಗ 5 ಸ್ಥಾನಗಳು ಖಾಲಿ ಇವೆ. ಇನ್ನು 4 ಮಂದಿಯನ್ನು ಕೈಬಿಟ್ಟರೆ 9 ಮಂದಿಯನ್ನು ಸಂಪುಟಕ್ಕೆ ತೆಗೆದುಕೊಳ್ಳಲು ಸಾಧ್ಯವಿದೆ. ಆದರೆ ಮೂಲ ಬಿಜೆಪಿಗರು ಹಾಗೂ ವಲಸೆ ಬಿಜೆಪಿಗರ ಮಧ್ಯೆ ಶೀತಲ ಸಮರ ನಡೆಯುತ್ತಲೇ ಇದೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸ್ವಲ್ಪ ಎಡವಿದರೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಆಗಲಿದೆ. ಇದನ್ನೆಲ್ಲ ಮನಗಂಡೇ ಬಿಜೆಪಿ ಹೈಕಮಾಂಡ್ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಹಿಂದೇಟು ಹಾಕುತ್ತಿದೆ.

ಪಕ್ಷದ ಇನ್ನೊಂದು ಮೂಲಗಳ ಪ್ರಕಾರ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆಯೊಲ್ಲ. ಬದಲಿಗೆ ಮುಖ್ಯಮಂತ್ರಿಯ ಬದಲಾವಣೆ ಕುರಿತು ಪಕ್ಷದ ಹೈಕಮಾಂಡ್ ಚಿಂತಿಸುತ್ತಿದೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೋಲಿಸಿದರೆ ಬೊಮ್ಮಾಯಿ ಅವರ ಪ್ರಭಾವ ಏನೂ ಸಾಲದು ಎನ್ನುವ ತೀರ್ಮಾನಕ್ಕೆ ಕೇಸರಿ ವರಿಷ್ಠರು ಬಂದಿದ್ದಾರೆ ಎನ್ನಲಾಗಿದೆ. ಪಕ್ಷದ ಅಧ್ಯಕ್ಷ ಸ್ಥಾನವನ್ನು ಲಿಂಗಾಯಿತ ಸಮುದಾಯಕ್ಕೆ ನೀಡಿ, ಮುಖ್ಯಮಂತ್ರಿ ಸ್ಥಾನವನ್ನು ಒಕ್ಕಲಿಗರಿಗೆ ಕೊಡುವ ಕುರಿತು ಕೂಡ ಚಿಂತನೆ ನಡೆದಿದೆ ಎನ್ನಲಾಗಿದೆ. ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಪ್ರಭಾವೀ ಒಕ್ಕಲಿಗ ನಾಯಕನಿಗೆ ಪಟ್ಟ ಕಟ್ಟುವ ಬಗ್ಗೆ ಚಿಂತನೆ ಆರಂಭವಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು