4:28 AM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಬಿಜೆಪಿ ಹೈಕಮಾಂಡ್ ನ ತೀರ್ಮಾನ ಏನು?: ರಾಜ್ಯ ಸಂಪುಟ ಪುನಾರಚನೆಯೇ? ಮುಖ್ಯಮಂತ್ರಿ ಬದಲಾವಣೆಯೇ?

30/04/2022, 18:25

ಬೆಂಗಳೂರು(reporterkarnataka.com): ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ರಾಜ್ಯ ಬೊಮ್ಮಾಯಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗುತ್ತಿತ್ತು. ಆದರೆ ಆಪರೇಶನ್ ಕಮಲದ ಮೂಲಕ ಅಸ್ತಿತ್ವಕ್ಕೆ ಬಂದ ರಾಜ್ಯ ಬಿಜೆಪಿ ಸರಕಾರದಲ್ಲಿ ಸಂಪುಟ ವಿಸ್ತರಣೆಗೆ ಕೈ ಹಾಕುವುದೆಂದರೆ ಜೇನುಗೂಡಿಗೆ ಕೈ ಹಾಕಿದ್ದಂತೇ ಸರಿ. ಇದೆಲ್ಲವನ್ನು ಅರಿತೇ ಸಂಪುಟ ಪುನಾರಚನೆಯ ಬಗ್ಗೆ ಪಕ್ಷದ ಹೈಕಮಾಂಡ್ ಇದುವರೆಗೆ ತೀರ್ಮಾನ ಕೈಗೊಂಡಿಲ್ಲ.

ಯುಗಾದಿ ಬೆನ್ನಲ್ಲೇ ರಾಜ್ಯ ಸಂಪುಟ ಪುನಾರಚನೆ ಎನ್ನಲಾಗಿತ್ತು. ಇದೀಗ ಏಪ್ರಿಲ್ ತಿಂಗಳ 1ನೇ, 2ನೇ, 3ನೇ ವಾರ ಕಳೆದು 4ನೇ ವಾರವೂ ಮುಗಿದು ಹೋಯಿತು. ಆದರೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲೇ ಇಲ್ಲ. ರಾಜ್ಯ ಸಂಪುಟದಲ್ಲಿ ಇದೀಗ 5 ಸ್ಥಾನಗಳು ಖಾಲಿ ಇವೆ. ಇನ್ನು 4 ಮಂದಿಯನ್ನು ಕೈಬಿಟ್ಟರೆ 9 ಮಂದಿಯನ್ನು ಸಂಪುಟಕ್ಕೆ ತೆಗೆದುಕೊಳ್ಳಲು ಸಾಧ್ಯವಿದೆ. ಆದರೆ ಮೂಲ ಬಿಜೆಪಿಗರು ಹಾಗೂ ವಲಸೆ ಬಿಜೆಪಿಗರ ಮಧ್ಯೆ ಶೀತಲ ಸಮರ ನಡೆಯುತ್ತಲೇ ಇದೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸ್ವಲ್ಪ ಎಡವಿದರೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಆಗಲಿದೆ. ಇದನ್ನೆಲ್ಲ ಮನಗಂಡೇ ಬಿಜೆಪಿ ಹೈಕಮಾಂಡ್ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಹಿಂದೇಟು ಹಾಕುತ್ತಿದೆ.

ಪಕ್ಷದ ಇನ್ನೊಂದು ಮೂಲಗಳ ಪ್ರಕಾರ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆಯೊಲ್ಲ. ಬದಲಿಗೆ ಮುಖ್ಯಮಂತ್ರಿಯ ಬದಲಾವಣೆ ಕುರಿತು ಪಕ್ಷದ ಹೈಕಮಾಂಡ್ ಚಿಂತಿಸುತ್ತಿದೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೋಲಿಸಿದರೆ ಬೊಮ್ಮಾಯಿ ಅವರ ಪ್ರಭಾವ ಏನೂ ಸಾಲದು ಎನ್ನುವ ತೀರ್ಮಾನಕ್ಕೆ ಕೇಸರಿ ವರಿಷ್ಠರು ಬಂದಿದ್ದಾರೆ ಎನ್ನಲಾಗಿದೆ. ಪಕ್ಷದ ಅಧ್ಯಕ್ಷ ಸ್ಥಾನವನ್ನು ಲಿಂಗಾಯಿತ ಸಮುದಾಯಕ್ಕೆ ನೀಡಿ, ಮುಖ್ಯಮಂತ್ರಿ ಸ್ಥಾನವನ್ನು ಒಕ್ಕಲಿಗರಿಗೆ ಕೊಡುವ ಕುರಿತು ಕೂಡ ಚಿಂತನೆ ನಡೆದಿದೆ ಎನ್ನಲಾಗಿದೆ. ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಪ್ರಭಾವೀ ಒಕ್ಕಲಿಗ ನಾಯಕನಿಗೆ ಪಟ್ಟ ಕಟ್ಟುವ ಬಗ್ಗೆ ಚಿಂತನೆ ಆರಂಭವಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು