9:40 AM Friday20 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಬಿಜೆಪಿ ಹೈಕಮಾಂಡ್ ನ ತೀರ್ಮಾನ ಏನು?: ರಾಜ್ಯ ಸಂಪುಟ ಪುನಾರಚನೆಯೇ? ಮುಖ್ಯಮಂತ್ರಿ ಬದಲಾವಣೆಯೇ?

30/04/2022, 18:25

ಬೆಂಗಳೂರು(reporterkarnataka.com): ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ರಾಜ್ಯ ಬೊಮ್ಮಾಯಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗುತ್ತಿತ್ತು. ಆದರೆ ಆಪರೇಶನ್ ಕಮಲದ ಮೂಲಕ ಅಸ್ತಿತ್ವಕ್ಕೆ ಬಂದ ರಾಜ್ಯ ಬಿಜೆಪಿ ಸರಕಾರದಲ್ಲಿ ಸಂಪುಟ ವಿಸ್ತರಣೆಗೆ ಕೈ ಹಾಕುವುದೆಂದರೆ ಜೇನುಗೂಡಿಗೆ ಕೈ ಹಾಕಿದ್ದಂತೇ ಸರಿ. ಇದೆಲ್ಲವನ್ನು ಅರಿತೇ ಸಂಪುಟ ಪುನಾರಚನೆಯ ಬಗ್ಗೆ ಪಕ್ಷದ ಹೈಕಮಾಂಡ್ ಇದುವರೆಗೆ ತೀರ್ಮಾನ ಕೈಗೊಂಡಿಲ್ಲ.

ಯುಗಾದಿ ಬೆನ್ನಲ್ಲೇ ರಾಜ್ಯ ಸಂಪುಟ ಪುನಾರಚನೆ ಎನ್ನಲಾಗಿತ್ತು. ಇದೀಗ ಏಪ್ರಿಲ್ ತಿಂಗಳ 1ನೇ, 2ನೇ, 3ನೇ ವಾರ ಕಳೆದು 4ನೇ ವಾರವೂ ಮುಗಿದು ಹೋಯಿತು. ಆದರೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲೇ ಇಲ್ಲ. ರಾಜ್ಯ ಸಂಪುಟದಲ್ಲಿ ಇದೀಗ 5 ಸ್ಥಾನಗಳು ಖಾಲಿ ಇವೆ. ಇನ್ನು 4 ಮಂದಿಯನ್ನು ಕೈಬಿಟ್ಟರೆ 9 ಮಂದಿಯನ್ನು ಸಂಪುಟಕ್ಕೆ ತೆಗೆದುಕೊಳ್ಳಲು ಸಾಧ್ಯವಿದೆ. ಆದರೆ ಮೂಲ ಬಿಜೆಪಿಗರು ಹಾಗೂ ವಲಸೆ ಬಿಜೆಪಿಗರ ಮಧ್ಯೆ ಶೀತಲ ಸಮರ ನಡೆಯುತ್ತಲೇ ಇದೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸ್ವಲ್ಪ ಎಡವಿದರೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಆಗಲಿದೆ. ಇದನ್ನೆಲ್ಲ ಮನಗಂಡೇ ಬಿಜೆಪಿ ಹೈಕಮಾಂಡ್ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಹಿಂದೇಟು ಹಾಕುತ್ತಿದೆ.

ಪಕ್ಷದ ಇನ್ನೊಂದು ಮೂಲಗಳ ಪ್ರಕಾರ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆಯೊಲ್ಲ. ಬದಲಿಗೆ ಮುಖ್ಯಮಂತ್ರಿಯ ಬದಲಾವಣೆ ಕುರಿತು ಪಕ್ಷದ ಹೈಕಮಾಂಡ್ ಚಿಂತಿಸುತ್ತಿದೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೋಲಿಸಿದರೆ ಬೊಮ್ಮಾಯಿ ಅವರ ಪ್ರಭಾವ ಏನೂ ಸಾಲದು ಎನ್ನುವ ತೀರ್ಮಾನಕ್ಕೆ ಕೇಸರಿ ವರಿಷ್ಠರು ಬಂದಿದ್ದಾರೆ ಎನ್ನಲಾಗಿದೆ. ಪಕ್ಷದ ಅಧ್ಯಕ್ಷ ಸ್ಥಾನವನ್ನು ಲಿಂಗಾಯಿತ ಸಮುದಾಯಕ್ಕೆ ನೀಡಿ, ಮುಖ್ಯಮಂತ್ರಿ ಸ್ಥಾನವನ್ನು ಒಕ್ಕಲಿಗರಿಗೆ ಕೊಡುವ ಕುರಿತು ಕೂಡ ಚಿಂತನೆ ನಡೆದಿದೆ ಎನ್ನಲಾಗಿದೆ. ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಪ್ರಭಾವೀ ಒಕ್ಕಲಿಗ ನಾಯಕನಿಗೆ ಪಟ್ಟ ಕಟ್ಟುವ ಬಗ್ಗೆ ಚಿಂತನೆ ಆರಂಭವಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು