3:31 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಪಿಎಸ್ ಐ ನೇಮಕಾತಿ ಹಗರಣ: ಮೊದಲ Rank ಪಡೆದ ರಚನಾ ವಿರುದ್ಧವೂ ಸಿಐಡಿಯಿಂದ ಕೇಸು ದಾಖಲು

02/05/2022, 19:10

ಬೆಂಗಳೂರು(reporterkarnataka.com): ಕಡು ಬಡತನದಲ್ಲಿ ಓದಿ ಪಿಎಸ್ ಐ ನೇಮಕಾತಿಯಲ್ಲಿ ಪಾಸ್ ಆಗಿ, ಹುದ್ದೆ ಪಡೆದಿದ್ದೇನೆ ಎಂದು ಪ್ರತಿಭಟನೆಯಲ್ಲಿ ಕಣ್ಣೀರ ಕತೆ ಹೇಳಿದ್ದ ಮೊದಲ Rank ಬಂದಿದ್ದ ರಚನಾ ವಿರುದ್ಧವೂ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಕಳೆದ ಏ.30ರಂದು ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರ ಪಿಎಸ್ ಐ ನೇಮಕಾತಿ ಮರು ಪರೀಕ್ಷೆ ವಿರೋಧಿಸಿ ನಡೆಸಿದ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳ ಪ್ರತಿಭಟನೆಯಲ್ಲಿ, ಮಹಿಳಾ ವಿಭಾಗದಲ್ಲಿ ಮೊದಲ Rank ಪಡೆದ ಅಭ್ಯರ್ಥಿ ರಚನಾ ಭಾಗಿಯಾಗಿ ತನ್ನ ಕಡು ಬಡತನದಲ್ಲಿ ಓದಿ ಪರೀಕ್ಷೆ ಪಾಸ್ ಮಾಡಿದ್ದನ್ನು ಹೇಳಿಕೊಂಡಿದ್ದರು.

ನಮ್ಮ ತಂದೆ ಹೆಣ್ಣು ಮಗು ಎನ್ನುವ ಕಾರಣಕ್ಕೆ ನನ್ನನ್ನು ಬಿಟ್ಟು ಹೋಗಿದ್ದರು. ತಾಯಿ ಸಾಕಿದ್ದು ಕಡು ಬಡತನದಲ್ಲಿ ಓದಿ ಪಿಎಸ್ ಐ ನೇಮಕಾತಿಯಲ್ಲಿ ಪಾಸ್ ಆಗಿ, ಹುದ್ದೆ ಪಡೆದಿದ್ದು ಪರೀಕ್ಷೆ ರದ್ದುಪಡಿಸಿರುವುದರಿಂದ ನಾನು ಸಂಕಷ್ಟಕ್ಕೆ ಸಿಲುಕಿದ್ದೇನೆ ಎಂದಿದ್ದರು

ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ನಾನು ಭಾಗಿಯಾಗೇ ಇಲ್ಲ. ಕಷ್ಟದಿಂದ ಬೆಳೆದು ಬಂದಿದ್ದೇನೆ. ನಾನು, ನಮ್ಮ ತಾಯಿ ಇಬ್ಬರೇ ಇದ್ದೇವೆ. ಕಡು ಬಡತನದಲ್ಲೇ ಓದಿ, ಪಿಎಸ್ ಐ ಪರೀಕ್ಷೆಯಲ್ಲಿ ಮಹಿಳಾ ವಿಭಾಗದಲ್ಲಿ ಮೊದಲ Rank ಪಡೆದಿದ್ದೇನೆ. ಆದರೆ ಸರ್ಕಾರ ಮರು ಪರೀಕ್ಷೆ ಆದೇಶ ಕೇಳಿ ಆತಂಕ ಗೊಂಡಿದ್ದೇನೆ ಎಂದು ಹೇಳಿದ್ದರು.

ಇದೀಗ ರಚನಾ ವಿರುದ್ಧವೂ ಎಫ್ ಐಆರ್ ದಾಖಲಾಗಿದೆ. ಅವರ ಒಎಂಆರ್ ಶೀಟ್ ಹಾಗೂ ಕಾರ್ನ್ ಶೀಟ್ ನಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ, ಅವರ ವಿರುದ್ಧವೂ ಸಿಐಡಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಪರಿಣಾಮ, ಎಫ್ ಐಆರ್ ದಾಖಲಾಗಿದೆ. ಇವರಷ್ಟೇ ಅಲ್ಲದೇ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಾಗೃತ್ ಸೇರಿದಂತೆ 22 ಮಂದಿಯ ವಿರುದ್ಧವೂ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು