2:11 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಆಡಳಿತದಲ್ಲಿ ನೂತನ ತಂತ್ರಜ್ಞಾನ ಮೂಲಕ ದೇಶದಲ್ಲಿ ಹಿಂದೆಂದೂ ಕಾಣದ ಅಭಿವೃದ್ಧಿ:  ಬರ್ಲಿನ್ ನಲ್ಲಿ ಪ್ರಧಾನಿ ಮೋದಿ

03/05/2022, 16:27

ಬರ್ಲಿನ್(reporterkarnataka.com): 

ಆಡಳಿತದಲ್ಲಿ ನೂತನ ತಂತ್ರಜ್ಞಾನಗಳನ್ನು ಸೇರಿಸಿಕೊಂಡು ಉತ್ತಮ ಆಡಳಿತ ನೀಡುವ ಮೂಲಕ ದೇಶದಲ್ಲಿ ಹಿಂದೆಂದೂ ಕಾಣದ ಅಭಿವೃದ್ಧಿಯಾಗುತ್ತಿದೆ ಎಂದು ಪ್ರಧಾನ ನರೇಂದ್ರ ಮೋದಿ ಹೇಳಿದ್ದಾರೆ.

ಯುರೋಪಿಯನ್‌ ಯೂನಿಯನ್‌ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಬರ್ಲಿನ್‌ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು.

2021ರಲ್ಲಿ ಪ್ರಪಂಚದಾದ್ಯಂತ ನಡೆದ ಒಟ್ಟೂ ಡಿಜಿಟಲ್‌ ಪಾವತಿಗಳಲ್ಲಿ 40% ದಷ್ಟು ಭಾರತದಲ್ಲೇ ಆಗಿದೆ. ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆಯ ಮೂಲಕ ಭ್ರಷ್ಟಾಚಾರವನ್ನು ಪರಿಣಾಮಾತ್ಮಕಾವಾಗಿ ಕಡಿತ ಗೊಳಿಸಲಾಗಿದೆ. ಕಳೆದ 7-8 ವರ್ಷಗಳಲ್ಲಿ ಭಾರತವು ನೇರ ವರ್ಗಾವಣೆ (DBT) ಮೂಲಕ 22 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ವರ್ಗಾಯಿಸಿದೆ. ಯಾವುದೇ ಮಧ್ಯವರ್ತಿಗಳಿಲ್ಲದೇ ಈ ಮೊತ್ತವು ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ತಲುಪಿದೆ ಎಂದು ಪ್ರಧಾನಿ ನುಡಿದರು.

ತಂತ್ರಜ್ಞಾನವನ್ನು ಆಡಳಿತದಲ್ಲಿ ಸಮರ್ಪಕವಾಗಿ ಬಳಸಿಕೊಂಡಿರುವುದು ನವ ಭಾರತದ ಹೊಸ ರಾಜಕೀಯ ಇಚ್ಛಾಶಕ್ತಿಯನ್ನು ತೋರಿಸುತ್ತದೆ ಎಂದು ಹೇಳಿದ ಅವರು “ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಸ್ಥಳೀಯ ಸ್ವಯಂ ಸರ್ಕಾರದ ಸುಮಾರು 10,000 ಸೇವೆಗಳು ಆನ್‌ಲೈನ್‌ನಲ್ಲಿ ಲಭ್ಯವಿದೆ. ಸರ್ಕಾರದ ನೆರವು, ವಿದ್ಯಾರ್ಥಿವೇತನ, ರೈತರಿಗೆ ಪಾವತಿಗಳು ಎಲ್ಲವೂ ಕೂಡ ಆನ್‌ ಲೈನ್‌ ನಲ್ಲಿ ನೇರವಾಗಿ ಪಾವತಿಸಲಾಗಿದೆ. ಈಗ ಸರ್ಕಾರದಿಂದ 1 ರೂ ಪಾವತಿಸಿದರೆ 15 ಪೈಸೆ ಮಾತ್ರ ಜನರಿಗೆ ಸೇರುತ್ತದೆ ಎಂದು ಹೇಳುವ ದುಸ್ಥಿತಿಯಿಲ್ಲ”.

“2014ರ ನಂತರ ಅಭಿವೃದ್ಧಿಯ ಹೊಸ ಶಕೆ ಪ್ರಾರಂಭವಾಗಿದೆ. ದೇಶದಲ್ಲಿ ದಾಖಲೆ ಸಂಖ್ಯೆಯ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುತ್ತಿದೆ. ಬೃಹತ್‌ ಪ್ರಮಾಣದಲ್ಲಿ ಮೆಟ್ರೊ ನಿರ್ಮಾಣ ಮಾಡಲಾಗುತ್ತಿದೆ. ಆಪ್ಟಿಕಲ್ ಫೈಬರ್ ನೆಟ್‌ವರ್ಕ್‌ನೊಂದಿಗೆ ಹಳ್ಳಿ-ಹಳ್ಳಿಗಳನ್ನೂ ಸಂಪರ್ಕಿಸಲಾಗುತ್ತಿದೆ. ಸರ್ಕಾರಿ ಇಲಾಖೆಗಳು ಮತ್ತು ಎಲ್ಲಾ ಪಾಲುದಾರರ ನಡುವೆ ಸಮನ್ವಯ ಸಾಧಿಸುವುದಕ್ಕಾಗಿ ಎಲ್ಲರನ್ನೂ ಒಂದೇ ವೇದಿಕೆಗೆ ತರಲು ಪಿಎಂ ಗತಿ ಶಕ್ತಿ ಎಂಬ ಮಾಸ್ಟರ್‌ ಪ್ಲ್ಯಾನ್‌ ಮಾಡಲಾಗಿದೆ. ಇದರಿಂದ ಹೊಸದಾಗಿ ನಿರ್ಮಾಣ ಮಾಡಿದ ರಸ್ತೆಯನ್ನು ಒಮ್ಮೆ ವಿದ್ಯುತ್‌ ಗೋಸ್ಕರ ಮತ್ತೊಮ್ಮೆ ನೀರಿಗೋಸ್ಕರ ಮತ್ತೆ ಅಗೆಯುವಂತಹ ಪ್ರಸಂಗ ಬರದಂತೆ ತಡೆಯಲಾಗುತ್ತದೆ. ಸರ್ವಾಂಗೀಣ ಅಭಿವೃದ್ಧಿಯತ್ತ ಗಮನ ಹರಿಸಲಾಗಿದೆ” ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು