9:57 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಡ್ಯ ಆದಿಹಳ್ಳಿ ಶ್ರೀ ಕೋಡಾಳರಾಯಸ್ವಾಮಿ ದೇವಾಲಯ ನಾಳೆ ಲೋಕಾರ್ಪಣೆ

03/05/2022, 21:30

ಮಂಡ್ಯ(reporterkarnataka.com): ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಆದಿಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಕೋಡಾಳರಾಯಸ್ವಾಮಿಯವರು ದೇವಾಲಯ ಕುಂಬಾಭಿಷೇಕ ಕಾರ್ಯಕ್ರಮ  ನಡೆಯಲಿದೆ. 

ಮುಖ್ಯ ಅತಿಥಿಗಳಾಗಿ ಯತೀಂದ್ರ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಶ್ರೀ ಶಿವಾನಂದಪುರಿ ಮಹಾಸ್ವಾಮಿಗಳು  ಹಾಗೂ ಸಚಿವ ನಾರಾಯಣಗೌಡ ಭಾಗವಹಿಸಲಿದ್ದಾರೆ.


ಶ್ರೀ ನಿರಂಜನಂದಪುರಿ ಮಹಾಸ್ವಾಮೀಜಿಗಳು ಪೀಠಾಧಿಪತಿಗಳು ಕನಕಗುರು ಪೀಠ ಕಾಗಿನೆಲೆ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದಗಳೊಂದಿಗೆ ಮೇ 4ರಂದು ಅದ್ದೂರಿಯಾಗಿ ನಡೆಯಲಿದೆ. ಮುಂಜಾನೆ 6 ಗಂಟೆಯಿಂದ ರುದ್ರಾಭಿಷೇಕ, ಮಹಾಲಕ್ಷ್ಮಿ ಹೋಮ, ರುದ್ರಹೋಮ , ಜಯದೇವ ಮತ್ತು ಪೂರ್ಣಹುತಿ ಹೋಮ ಹಾಗೂ ಬೆಳಿಗ್ಗೆ 7  ಗಂಟೆಗೆ ಊಟದ ದೇವರುಗಳ ಗಂಗ ಸ್ಥಾನ, ಶಿವಪೂಜೆ, ಪೂಜಾಕುಣಿತ,  ನಂದಿ ಧ್ವಜ ಕುಣಿತ, ಕಾರ್ಯಕ್ರಮವಿರುತ್ತದೆ 10:00 ಗಂಟೆಗೆ ಕಳಸಾರೋಹಣ ಹಾಗೂ ಕುಂಭಾಭಿಷೇಕ,  ಮಹಾಮಂಗಳಾರತಿ ನಡೆಯುತ್ತದೆ ಹಾಗೂ 12 ಗಂಟೆಗೆ ಧಾರ್ಮಿಕ ಸಭೆ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು