4:12 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಸುಬ್ರಹ್ಮಣ್ಯ ಪರಾಡ್ಕರ್ ಗೆ ವಿಪ್ರಭೂಷಣ ಪ್ರಶಸ್ತಿ: ನಾಳೆ ಅಶ್ವತ್ಥಪುರದಲ್ಲಿ ಪ್ರದಾನ

04/05/2022, 11:06

ಮೂಡುಬಿದರೆ(reporterkarnataka.com): ನಾರಾಯಣಾನಂದ ಸರಸ್ವತಿ ಸ್ವಾಮಿ ಟ್ರಸ್ಟ್ ವತಿಯಿಂದ ನೀಡಲಾಗುವ 

ವಿಪ್ರ ಭೂಷಣ ಪ್ರಶಸ್ತಿ ಈ ಬಾರಿ ವೇದಮೂರ್ತಿ‌ ಸುಬ್ರಹ್ಮಣ್ಯ ಭಟ್ ಪರಾಡ್ಕರ್ ಅವರಿಗೆ ಲಭಿಸಿದೆ. 

ಮೇ 5ರಂದು ಸಂಜೆ 4 ಗಂಟೆಗೆ ಅಶ್ವತ್ಥಪುರ ಶ್ರೀಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು  ಮ್ಯಾನೇಜಿಂಗ್ ಟ್ರಸ್ಟಿ ಯಜ್ಞೇಶ್ವರ ಭಟ್ ತಿಳಿಸಿದ್ದಾರೆ.

ಕಟೀಲು ಆನುವಂಶಿಕ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ, ಆಶ್ವತ್ಥಪುರ ಕ್ಷೇತ್ರ ಆಡಳಿತ ಮೊಕ್ತೇಸರ ಎಲ್.ವಿ. ರಘುನಾಥ್ ಭಟ್, ಟ್ರಸ್ಟಿ ಕಿರಣ್ ಮಂಜನಬೈಲ್, ಉಡುಪಿ ಯುವ ಬ್ರಾಹ್ಮಣ ಪರಿಷತ್ ಅಧ್ಯಕ್ಷ ಚೈತನ್ಯ ಎಂ.ಜಿ., ಸಂಸ್ಕೃತ ವಿದ್ವಾಂಸ ಎ.ವಿದ್ಯನಾಥ ಶಾಸ್ತ್ರಿ ಜೋಶಿ ಭಾಗವಹಿಸುವರು. 

ಬಳಿಕ ಕದ್ರಿ ಯಕ್ಷ ಕೂಟ ವತಿಯಿಂದ ರಾಮಚಂದ್ರ ಭಟ್ ಎಲ್ಲೂರು ನಿರ್ದೇಶನದಲ್ಲಿ, ಜಿತೇಂದ್ರ ಕುಂದೇಶ್ವರ ಸಂಯೋಜನೆಯಲ್ಲಿ “ಶಶಿಪ್ರಭಾ ಪರಿಣಯ” ಕಾಲಮಿತಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. 
ವೇದಮೂರ್ತಿ
ಶಿವಾನಂದ ಕೆ. ನೇತೃತ್ವದಲ್ಲಿ ಪ್ರಶಸ್ತಿ ಪುರಸ್ಕೃತರ ಪುರ ಮೆರವಣಿಗೆ ನಡೆಯಲಿದೆ. ರಾಜೇಶ್ವರ ಭಟ್, ವಿಷ್ಣು ಮೂರ್ತಿ ಭಟ್, ಛಾಯಾಪತಿ ಕಂಚಿಬೈಲ್ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು