3:15 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

Breaking News : ಮರವೂರು ಸೇತುವೆಯಲ್ಲಿ ಅಪಾಯಕಾರಿ ಬಿರುಕು : ನೀರು ಪಾಲಾಗಲಿದೆಯೆ ಮತ್ತೊಂದು ಮುಖ್ಯ ಸೇತುವೆ !

15/06/2021, 07:46

ಮಂಗಳೂರು(ReporterKarnataka.com)

ಮಂಗಳೂರಿನ ಕಾವೂರು ಬಳಿಯ ಮುಖ್ಯ ಸೇತುವೆ ಬಿರುಕು ಬಿಟ್ಟಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ.

ಮರವೂರಿನ ಫಲ್ಗುಣಿ ನದಿಯ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದನ್ನು ತಿಳಿದ ಕಾವೂರು ಪೊಲೀಸರು ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆ ಹಾಕಿದ್ದು ಹೆಚ್ಚಿನ ಅಪಾಯವಾಗುವುದನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಲಾಗಿದೆ.

ಸೋಮವಾರ ರಾತ್ರಿಯೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಬ್ಯಾರಿಕೇಡ್ ಹಾಕಿ, ರಸ್ತೆಯನ್ನು ಬಂದ್ ಮಾಡಲು ಸೂಚಿಸಿದ್ದು ಮಂಗಳೂರು ನಗರದಿಂದ ಬಜ್ಪೆ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯ ಸಂಪರ್ಕ ಕಡಿತಗೊಂಡಿದೆ.

ಬಜ್ಪೆ ಏರ್ಪೋರ್ಟ್‌ಗೆ ತೆರಳುವ ವಾಹನಗಳನ್ನು ಕಾವೂರಿನಲ್ಲಿ ಡೈವರ್ಟ್ ಮಾಡಲಾಗುತ್ತಿದೆ.

ಕಾವೂರು ಕಡೆಯಿಂದ ಕಟೀಲು, ಬಜ್ಜೆಗೆ ತೆರಳುವ ವಾಹನಗಳಿಗೂ ಸಂಚಾರಕ್ಕೆ ಅವಕಾಶ ಇಲ್ಲ. ಮಂಗಳೂರು ನಗರ ಭಾಗದಿಂದ ಬಜ್ಜೆಗೆ ತೆರಳಬೇಕಿದ್ದರೆ ಇನ್ನು ಗುರುಪುರ ಸೇತುವೆಯ ಮೂಲಕ ಸುತ್ತು ಬಳಸಿ ತೆರಳಬೇಕಾಗಿದೆ. ಮಂಗಳೂರು ಗ್ರಾಮೀಣ ಭಾಗದಿಂದ ನಗರಕ್ಕೆ ಪ್ರಮುಖ ಕೊಂಡಿಯಾಗಿದ್ದ ಸೇತುವೆ ಇಂದು ಕುಸಿಯುವ ಭೀತಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು