7:32 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

Breaking News : ಮರವೂರು ಸೇತುವೆಯಲ್ಲಿ ಅಪಾಯಕಾರಿ ಬಿರುಕು : ನೀರು ಪಾಲಾಗಲಿದೆಯೆ ಮತ್ತೊಂದು ಮುಖ್ಯ ಸೇತುವೆ !

15/06/2021, 07:46

ಮಂಗಳೂರು(ReporterKarnataka.com)

ಮಂಗಳೂರಿನ ಕಾವೂರು ಬಳಿಯ ಮುಖ್ಯ ಸೇತುವೆ ಬಿರುಕು ಬಿಟ್ಟಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ.

ಮರವೂರಿನ ಫಲ್ಗುಣಿ ನದಿಯ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದನ್ನು ತಿಳಿದ ಕಾವೂರು ಪೊಲೀಸರು ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆ ಹಾಕಿದ್ದು ಹೆಚ್ಚಿನ ಅಪಾಯವಾಗುವುದನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಲಾಗಿದೆ.

ಸೋಮವಾರ ರಾತ್ರಿಯೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಬ್ಯಾರಿಕೇಡ್ ಹಾಕಿ, ರಸ್ತೆಯನ್ನು ಬಂದ್ ಮಾಡಲು ಸೂಚಿಸಿದ್ದು ಮಂಗಳೂರು ನಗರದಿಂದ ಬಜ್ಪೆ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯ ಸಂಪರ್ಕ ಕಡಿತಗೊಂಡಿದೆ.

ಬಜ್ಪೆ ಏರ್ಪೋರ್ಟ್‌ಗೆ ತೆರಳುವ ವಾಹನಗಳನ್ನು ಕಾವೂರಿನಲ್ಲಿ ಡೈವರ್ಟ್ ಮಾಡಲಾಗುತ್ತಿದೆ.

ಕಾವೂರು ಕಡೆಯಿಂದ ಕಟೀಲು, ಬಜ್ಜೆಗೆ ತೆರಳುವ ವಾಹನಗಳಿಗೂ ಸಂಚಾರಕ್ಕೆ ಅವಕಾಶ ಇಲ್ಲ. ಮಂಗಳೂರು ನಗರ ಭಾಗದಿಂದ ಬಜ್ಜೆಗೆ ತೆರಳಬೇಕಿದ್ದರೆ ಇನ್ನು ಗುರುಪುರ ಸೇತುವೆಯ ಮೂಲಕ ಸುತ್ತು ಬಳಸಿ ತೆರಳಬೇಕಾಗಿದೆ. ಮಂಗಳೂರು ಗ್ರಾಮೀಣ ಭಾಗದಿಂದ ನಗರಕ್ಕೆ ಪ್ರಮುಖ ಕೊಂಡಿಯಾಗಿದ್ದ ಸೇತುವೆ ಇಂದು ಕುಸಿಯುವ ಭೀತಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು