7:08 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Breaking News : ಮರವೂರು ಸೇತುವೆಯಲ್ಲಿ ಅಪಾಯಕಾರಿ ಬಿರುಕು : ನೀರು ಪಾಲಾಗಲಿದೆಯೆ ಮತ್ತೊಂದು ಮುಖ್ಯ ಸೇತುವೆ !

15/06/2021, 07:46

ಮಂಗಳೂರು(ReporterKarnataka.com)

ಮಂಗಳೂರಿನ ಕಾವೂರು ಬಳಿಯ ಮುಖ್ಯ ಸೇತುವೆ ಬಿರುಕು ಬಿಟ್ಟಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ.

ಮರವೂರಿನ ಫಲ್ಗುಣಿ ನದಿಯ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದನ್ನು ತಿಳಿದ ಕಾವೂರು ಪೊಲೀಸರು ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆ ಹಾಕಿದ್ದು ಹೆಚ್ಚಿನ ಅಪಾಯವಾಗುವುದನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಲಾಗಿದೆ.

ಸೋಮವಾರ ರಾತ್ರಿಯೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಬ್ಯಾರಿಕೇಡ್ ಹಾಕಿ, ರಸ್ತೆಯನ್ನು ಬಂದ್ ಮಾಡಲು ಸೂಚಿಸಿದ್ದು ಮಂಗಳೂರು ನಗರದಿಂದ ಬಜ್ಪೆ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯ ಸಂಪರ್ಕ ಕಡಿತಗೊಂಡಿದೆ.

ಬಜ್ಪೆ ಏರ್ಪೋರ್ಟ್‌ಗೆ ತೆರಳುವ ವಾಹನಗಳನ್ನು ಕಾವೂರಿನಲ್ಲಿ ಡೈವರ್ಟ್ ಮಾಡಲಾಗುತ್ತಿದೆ.

ಕಾವೂರು ಕಡೆಯಿಂದ ಕಟೀಲು, ಬಜ್ಜೆಗೆ ತೆರಳುವ ವಾಹನಗಳಿಗೂ ಸಂಚಾರಕ್ಕೆ ಅವಕಾಶ ಇಲ್ಲ. ಮಂಗಳೂರು ನಗರ ಭಾಗದಿಂದ ಬಜ್ಜೆಗೆ ತೆರಳಬೇಕಿದ್ದರೆ ಇನ್ನು ಗುರುಪುರ ಸೇತುವೆಯ ಮೂಲಕ ಸುತ್ತು ಬಳಸಿ ತೆರಳಬೇಕಾಗಿದೆ. ಮಂಗಳೂರು ಗ್ರಾಮೀಣ ಭಾಗದಿಂದ ನಗರಕ್ಕೆ ಪ್ರಮುಖ ಕೊಂಡಿಯಾಗಿದ್ದ ಸೇತುವೆ ಇಂದು ಕುಸಿಯುವ ಭೀತಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು