1:08 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

Breaking News : ಮರವೂರು ಸೇತುವೆಯಲ್ಲಿ ಅಪಾಯಕಾರಿ ಬಿರುಕು : ನೀರು ಪಾಲಾಗಲಿದೆಯೆ ಮತ್ತೊಂದು ಮುಖ್ಯ ಸೇತುವೆ !

15/06/2021, 07:46

ಮಂಗಳೂರು(ReporterKarnataka.com)

ಮಂಗಳೂರಿನ ಕಾವೂರು ಬಳಿಯ ಮುಖ್ಯ ಸೇತುವೆ ಬಿರುಕು ಬಿಟ್ಟಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ.

ಮರವೂರಿನ ಫಲ್ಗುಣಿ ನದಿಯ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದನ್ನು ತಿಳಿದ ಕಾವೂರು ಪೊಲೀಸರು ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆ ಹಾಕಿದ್ದು ಹೆಚ್ಚಿನ ಅಪಾಯವಾಗುವುದನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಲಾಗಿದೆ.

ಸೋಮವಾರ ರಾತ್ರಿಯೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಬ್ಯಾರಿಕೇಡ್ ಹಾಕಿ, ರಸ್ತೆಯನ್ನು ಬಂದ್ ಮಾಡಲು ಸೂಚಿಸಿದ್ದು ಮಂಗಳೂರು ನಗರದಿಂದ ಬಜ್ಪೆ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯ ಸಂಪರ್ಕ ಕಡಿತಗೊಂಡಿದೆ.

ಬಜ್ಪೆ ಏರ್ಪೋರ್ಟ್‌ಗೆ ತೆರಳುವ ವಾಹನಗಳನ್ನು ಕಾವೂರಿನಲ್ಲಿ ಡೈವರ್ಟ್ ಮಾಡಲಾಗುತ್ತಿದೆ.

ಕಾವೂರು ಕಡೆಯಿಂದ ಕಟೀಲು, ಬಜ್ಜೆಗೆ ತೆರಳುವ ವಾಹನಗಳಿಗೂ ಸಂಚಾರಕ್ಕೆ ಅವಕಾಶ ಇಲ್ಲ. ಮಂಗಳೂರು ನಗರ ಭಾಗದಿಂದ ಬಜ್ಜೆಗೆ ತೆರಳಬೇಕಿದ್ದರೆ ಇನ್ನು ಗುರುಪುರ ಸೇತುವೆಯ ಮೂಲಕ ಸುತ್ತು ಬಳಸಿ ತೆರಳಬೇಕಾಗಿದೆ. ಮಂಗಳೂರು ಗ್ರಾಮೀಣ ಭಾಗದಿಂದ ನಗರಕ್ಕೆ ಪ್ರಮುಖ ಕೊಂಡಿಯಾಗಿದ್ದ ಸೇತುವೆ ಇಂದು ಕುಸಿಯುವ ಭೀತಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು