12:57 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ವಿಟ್ಲ: 9ನೇ ತರಗತಿಯ ಅಪ್ರಾಪ್ತ ಬಾಲಕಿ ನೇಣಿಗೆ ಶರಣು; ಪ್ರೀತಿಸಲು ಒತ್ತಾಯಿಸುತ್ತಿದ್ದ ಯುವಕನ ವಿರುದ್ಧ ಕೇಸು

05/05/2022, 10:16

ಬಂಟ್ವಾಳ(reporterkarnataka.com): ಇಲ್ಲಿನ ವಿಟ್ಲ ಸಮೀಪದ ಕನ್ಯಾನ ಗ್ರಾಮದ ಕಾಣಿಯೂರು ನಿವಾಸಿ 14 ವರ್ಷದ 9ನೇ ತರಗತಿಯ ಅಪ್ರಾಪ್ತ ವಯಸ್ಸಿನ ಬಾಲಕಿ ಬುಧವಾರ ಶವವಾಗಿ ಪತ್ತೆಯಾಗಿದ್ದಾಳೆ.

ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದು, ಹೆತ್ತವರು ಆಗಮಿಸಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಕೆಯ ಪೋಷಕರು ಕೆಲಸದ ನಿಮಿತ್ತ ಮತ್ತು ಆಕೆಯ ಸಹೋದರ ಔಷಧಿ ತರಲು ಹೊರಗೆ ಹೋಗಿದ್ದರು ಎಂದು ತಿಳಿದು ಬಂದಿದೆ.

ಕೆಲಸ ನಿಮಿತ್ತ ಹೊರಗೆ ಹೋಗಿದ್ದ ಆಕೆಯ ಪೋಷಕರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಮನೆಗೆ ಹಿಂತಿರುಗಿದಾಗ ಮಗಳು ಮಲಗುವ ಕೋಣೆಯ ಮೇಲ್ಛಾವಣಿಯಲ್ಲಿ ನೇಣು ಬಿಗಿದಿರುವುದನ್ನು ಕಂಡು ಬಂತು.

ಹೆತ್ತವರು ಇತ್ತೀಚೆಗೆ ತಮ್ಮ ಮಗಳ ಮೊಬೈಲ್ ಫೋನ್ ಪರಿಶೀಲಿಸಿದಾಗ ಆಕೆ 30 ವರ್ಷದ ಸಾಹುಲ್ ಹಮೀದ್ ಎಂಬಾತನನ್ನು ಪ್ರೀತಿಸುತ್ತಿರುವ ವಿಷಯ ಬೆಳಕಿಗೆ ಬಂತು ಎಂದು ಆಕೆಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ಹಮೀದ್ ಜೊತೆಗಿನ ಸಂಬಂಧವನ್ನು ಮುರಿಯುವಂತೆ ಮಗಳನ್ನು ಕೇಳಿಕೊಂಡಿದ್ದಾರೆ. ಅಲ್ಲದೇ ಹಮೀದ್ ನನ್ನು ಭೇಟಿಯಾಗಿ ಮಗಳ ಜತೆಗಿನ ಸಂಬಂಧವನ್ನು ಮುಂದುವರಿಸದಂತೆ ಕೇಳಿಕೊಂಡಿದ್ದಾರೆ. ಆದರೆ ಹಮೀದ್ ಕೇಳಲಿಲ್ಲ ಮತ್ತು ಸಂಬಂಧವನ್ನು ಮುಂದುವರಿಸಲು ಮಗಳನ್ನು ಪೀಡಿಸುತ್ತಿದ್ದನು. ಸಂಬಂಧವನ್ನು ಮುಂದುವರಿಸಲು ಉದ್ದೇಶಿಸದಿದ್ದರೆ ಜೀವನವನ್ನು ಕೊನೆಗೊಳಿಸುವಂತೆ ಹಮೀದ್ ಬಾಲಕಿಗೆ ತಾಕೀತು ಮಾಡಿದ್ದ ಎಂದು ಬಾಲಕಿಯ ತಂದೆ ಹೇಳಿದ್ದಾರೆ.

ಅವರ ದೂರಿನ ಮೇರೆಗೆ ವಿಟ್ಲ ಪೊಲೀಸರು ಹಮೀದ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 305 ( ಅಪ್ರಾಪ್ತೆಯ ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಬಲಿಪಶು ಪರಿಶಿಷ್ಟ ಜಾತಿಗೆ ಸೇರಿದವರಾಗಿರುವುದರಿಂದ ಹಮೀದ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3 (2) (v) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು