7:05 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ವಿಟ್ಲ: 9ನೇ ತರಗತಿಯ ಅಪ್ರಾಪ್ತ ಬಾಲಕಿ ನೇಣಿಗೆ ಶರಣು; ಪ್ರೀತಿಸಲು ಒತ್ತಾಯಿಸುತ್ತಿದ್ದ ಯುವಕನ ವಿರುದ್ಧ ಕೇಸು

05/05/2022, 10:16

ಬಂಟ್ವಾಳ(reporterkarnataka.com): ಇಲ್ಲಿನ ವಿಟ್ಲ ಸಮೀಪದ ಕನ್ಯಾನ ಗ್ರಾಮದ ಕಾಣಿಯೂರು ನಿವಾಸಿ 14 ವರ್ಷದ 9ನೇ ತರಗತಿಯ ಅಪ್ರಾಪ್ತ ವಯಸ್ಸಿನ ಬಾಲಕಿ ಬುಧವಾರ ಶವವಾಗಿ ಪತ್ತೆಯಾಗಿದ್ದಾಳೆ.

ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದು, ಹೆತ್ತವರು ಆಗಮಿಸಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಕೆಯ ಪೋಷಕರು ಕೆಲಸದ ನಿಮಿತ್ತ ಮತ್ತು ಆಕೆಯ ಸಹೋದರ ಔಷಧಿ ತರಲು ಹೊರಗೆ ಹೋಗಿದ್ದರು ಎಂದು ತಿಳಿದು ಬಂದಿದೆ.

ಕೆಲಸ ನಿಮಿತ್ತ ಹೊರಗೆ ಹೋಗಿದ್ದ ಆಕೆಯ ಪೋಷಕರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಮನೆಗೆ ಹಿಂತಿರುಗಿದಾಗ ಮಗಳು ಮಲಗುವ ಕೋಣೆಯ ಮೇಲ್ಛಾವಣಿಯಲ್ಲಿ ನೇಣು ಬಿಗಿದಿರುವುದನ್ನು ಕಂಡು ಬಂತು.

ಹೆತ್ತವರು ಇತ್ತೀಚೆಗೆ ತಮ್ಮ ಮಗಳ ಮೊಬೈಲ್ ಫೋನ್ ಪರಿಶೀಲಿಸಿದಾಗ ಆಕೆ 30 ವರ್ಷದ ಸಾಹುಲ್ ಹಮೀದ್ ಎಂಬಾತನನ್ನು ಪ್ರೀತಿಸುತ್ತಿರುವ ವಿಷಯ ಬೆಳಕಿಗೆ ಬಂತು ಎಂದು ಆಕೆಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ಹಮೀದ್ ಜೊತೆಗಿನ ಸಂಬಂಧವನ್ನು ಮುರಿಯುವಂತೆ ಮಗಳನ್ನು ಕೇಳಿಕೊಂಡಿದ್ದಾರೆ. ಅಲ್ಲದೇ ಹಮೀದ್ ನನ್ನು ಭೇಟಿಯಾಗಿ ಮಗಳ ಜತೆಗಿನ ಸಂಬಂಧವನ್ನು ಮುಂದುವರಿಸದಂತೆ ಕೇಳಿಕೊಂಡಿದ್ದಾರೆ. ಆದರೆ ಹಮೀದ್ ಕೇಳಲಿಲ್ಲ ಮತ್ತು ಸಂಬಂಧವನ್ನು ಮುಂದುವರಿಸಲು ಮಗಳನ್ನು ಪೀಡಿಸುತ್ತಿದ್ದನು. ಸಂಬಂಧವನ್ನು ಮುಂದುವರಿಸಲು ಉದ್ದೇಶಿಸದಿದ್ದರೆ ಜೀವನವನ್ನು ಕೊನೆಗೊಳಿಸುವಂತೆ ಹಮೀದ್ ಬಾಲಕಿಗೆ ತಾಕೀತು ಮಾಡಿದ್ದ ಎಂದು ಬಾಲಕಿಯ ತಂದೆ ಹೇಳಿದ್ದಾರೆ.

ಅವರ ದೂರಿನ ಮೇರೆಗೆ ವಿಟ್ಲ ಪೊಲೀಸರು ಹಮೀದ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 305 ( ಅಪ್ರಾಪ್ತೆಯ ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಬಲಿಪಶು ಪರಿಶಿಷ್ಟ ಜಾತಿಗೆ ಸೇರಿದವರಾಗಿರುವುದರಿಂದ ಹಮೀದ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3 (2) (v) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು