4:29 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪಿಎಸ್‌ಐ ನೇಮಕಾತಿ ಹಗರಣ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿ ಮತ್ತೆ ನೋಟಿಸ್

05/05/2022, 10:38

ಬೆಂಗಳೂರು(reporterkarnataka.com): ಪಿಎಸ್‌ಐ ನೇಮಕಾತಿ ಅಕ್ರಮದ ವಿಚಾರಣೆಗೆ ಸಂಬಂಧಿಸಿದಂತೆ ಹಾಜರಾಗಲು ಶಾಸಕ ಪ್ರಿಯಾಂಕ ಖರ್ಗೆಗೆ ಸಿಐಡಿ ಮತ್ತೆ ನೋಟಿಸ್ ಜಾರಿಗೊಳಿಸಿದೆ.

ಪ್ರಿಯಾಂಕ ಖರ್ಗೆ ಅವರಿಗೆ ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಈಗಾಗಲೇ ಎರಡು ಬಾರಿ ಸಿಐಡಿ ನೋಟಿಸ್ ಜಾರಿಗೊಳಿಸಿತ್ತು. ಖರ್ಗೆ ಲಿಖಿತ ಉತ್ತರ ಕೂಡ ನೀಡಿದ್ದರು.

ಆದರೆ ಪ್ರಕರಣದಲ್ಲಿ ನೀವು ಸಲ್ಲಿಸಿರುವ ಉತ್ತರದಲ್ಲಿ ಪ್ರಕರಣಕ್ಕೆ ಸಂಬಂಧವಿಲ್ಲದ ಸಂಗತಿಗಳಿವೆ. ಹೀಗಾಗಿ ಮತ್ತೆ ತಮ್ಮ ಬಳಿ ಪ್ರಕರಣ ಸಂಬಂಧ ಇರುವಂತ ದಾಖಲಾತಿ, ಮಾಹಿತಿ ಸಲ್ಲಿಸುವಂತೆ ಸಿಐಡಿ ನೋಟಿಸ್ ಜಾರಿಗೊಳಿಸಿದೆ.

ಈ ಬಗ್ಗೆ ಶಾಸಕ ಪ್ರಿಯಾಂಕ್ ಖರ್ಗೆಗೆ ಪಿಎಸ್‌ಐ ನೇಮಕಾತಿ ಅಕ್ರಮದ ತನಿಖೆ ನಡೆಸುತ್ತಿರುವ ಸಿಐಡಿಯ ಸಹಾಯಕ ತನಿಖಾಧಿಕಾರಿ ಹಾಗೂ ಪೊಲೀಸ್ ಉಪಾಧಿಕ್ಷಕ ನರಸಿಂಹಮೂರ್ತಿ ಪಿ ಅವರು ನೋಟಿಸ್ ಜಾರಿ ಮಾಡಿದ್ದು,’ ದಿನಾಂಕ 28-04-2022ರಂದು ಒಂದು ಉತ್ತರವನ್ನು ನೀವು ಸಲ್ಲಿಸಿದ್ದು, ಅದನ್ನು ಪರಿಶೀಲಿಸಿದಾಗ ಅದರಲ್ಲಿ ಪ್ರಕರಣಕ್ಕೆ ಸಂಬಂಧವಿಲ್ಲದ ಸಂಗತಿಗಳು ಕಂಡು ಬಂದಿರುತ್ತವೆ ಎಂದಿದ್ದಾರೆ.

ಸಾರ್ವಜನಿಕ ಜಾಲತಾಣಗಳಲ್ಲಿ ಎಷ್ಟೋ ಅನಗತ್ಯ ಹಾಗೂ ನೈಜತೆಯಿಲ್ಲದ ಮಾಹಿತಿಗಳು ಹರಿದಾಡುತ್ತಿದ್ದು, ಅವುಗಳನ್ನು ತನಿಖೆಯಲ್ಲಿ ಸಾಕ್ಷ್ಯವನ್ನಾಗಿಸಿ, ಅಳವಡಿಸಿಕೊಳ್ಳಲು ಬರುವುದಿಲ್ಲ. ಆದರೆ ತಾವು ಕಲಬುರ್ಗಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಆಡಿಯೋ ಕ್ಲಿಪಿಂಗ್ ಹಾಜರು ಪಡಿಸಿ, ತಮ್ಮ ಬಳಿ ಇನ್ನೂ ಸಾಕ್ಷ್ಯಾಧಾರಗಳು ಇವೆ ಎಂದು ಹೇಳಿದ್ದನ್ನು ಗಮನಿಸಲಾಗಿದೆ. ತಾವು ಅವುಗಳನ್ನು ಹಾಜರು ಪಡಿಸುವ ಮೊದಲು, ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿದ ನಂತರ

ಮಾಧ್ಯಮದವರ ಮುಂದೆ ಹಾಜರುಪಡಿಸಿರುತ್ತೀರಿ ಎಂದು ಭಾವಿಸಿ, ಸದರಿ ನೋಟೀಸ್ ಅನ್ನು ನೀಡಲಾಗಿತ್ತು ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಜವಾಬ್ದಾರಿಯುತ ಮತ್ತು ಗೌರವಾನ್ವಿತ ಶಾಸಕರಾದ ತಾವು, ಈ ನೋಟಿಸ್ ಮುಟ್ಟಿದ ಎರಡು ದಿನಗಳೊಳಗಾಗಿ ಕೆಳಗೆ ಸಹಿ ಮಾಡಿದ ಸಹಾಯಕ ತನಿಖಾಧಿಕಾರಿಯವರ ಮುಂದೆ, ಹಾಜರಾಗಿ, ಪ್ರಕರಣದ ತನಿಖೆಗೆ ಸಹಾಯವಾಗಬಹುದಾದ ತಮ್ಮ ಬಳಿಯಿರುವಂತ ದಾಖಲಾತಿ ಹಾಗೂ ಮಾಹಿತಿಯನ್ನು ಹಾಜರುಪಡಿಸಲು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು