12:05 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಪಿಎಸ್‌ಐ ನೇಮಕಾತಿ ಹಗರಣ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿ ಮತ್ತೆ ನೋಟಿಸ್

05/05/2022, 10:38

ಬೆಂಗಳೂರು(reporterkarnataka.com): ಪಿಎಸ್‌ಐ ನೇಮಕಾತಿ ಅಕ್ರಮದ ವಿಚಾರಣೆಗೆ ಸಂಬಂಧಿಸಿದಂತೆ ಹಾಜರಾಗಲು ಶಾಸಕ ಪ್ರಿಯಾಂಕ ಖರ್ಗೆಗೆ ಸಿಐಡಿ ಮತ್ತೆ ನೋಟಿಸ್ ಜಾರಿಗೊಳಿಸಿದೆ.

ಪ್ರಿಯಾಂಕ ಖರ್ಗೆ ಅವರಿಗೆ ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಈಗಾಗಲೇ ಎರಡು ಬಾರಿ ಸಿಐಡಿ ನೋಟಿಸ್ ಜಾರಿಗೊಳಿಸಿತ್ತು. ಖರ್ಗೆ ಲಿಖಿತ ಉತ್ತರ ಕೂಡ ನೀಡಿದ್ದರು.

ಆದರೆ ಪ್ರಕರಣದಲ್ಲಿ ನೀವು ಸಲ್ಲಿಸಿರುವ ಉತ್ತರದಲ್ಲಿ ಪ್ರಕರಣಕ್ಕೆ ಸಂಬಂಧವಿಲ್ಲದ ಸಂಗತಿಗಳಿವೆ. ಹೀಗಾಗಿ ಮತ್ತೆ ತಮ್ಮ ಬಳಿ ಪ್ರಕರಣ ಸಂಬಂಧ ಇರುವಂತ ದಾಖಲಾತಿ, ಮಾಹಿತಿ ಸಲ್ಲಿಸುವಂತೆ ಸಿಐಡಿ ನೋಟಿಸ್ ಜಾರಿಗೊಳಿಸಿದೆ.

ಈ ಬಗ್ಗೆ ಶಾಸಕ ಪ್ರಿಯಾಂಕ್ ಖರ್ಗೆಗೆ ಪಿಎಸ್‌ಐ ನೇಮಕಾತಿ ಅಕ್ರಮದ ತನಿಖೆ ನಡೆಸುತ್ತಿರುವ ಸಿಐಡಿಯ ಸಹಾಯಕ ತನಿಖಾಧಿಕಾರಿ ಹಾಗೂ ಪೊಲೀಸ್ ಉಪಾಧಿಕ್ಷಕ ನರಸಿಂಹಮೂರ್ತಿ ಪಿ ಅವರು ನೋಟಿಸ್ ಜಾರಿ ಮಾಡಿದ್ದು,’ ದಿನಾಂಕ 28-04-2022ರಂದು ಒಂದು ಉತ್ತರವನ್ನು ನೀವು ಸಲ್ಲಿಸಿದ್ದು, ಅದನ್ನು ಪರಿಶೀಲಿಸಿದಾಗ ಅದರಲ್ಲಿ ಪ್ರಕರಣಕ್ಕೆ ಸಂಬಂಧವಿಲ್ಲದ ಸಂಗತಿಗಳು ಕಂಡು ಬಂದಿರುತ್ತವೆ ಎಂದಿದ್ದಾರೆ.

ಸಾರ್ವಜನಿಕ ಜಾಲತಾಣಗಳಲ್ಲಿ ಎಷ್ಟೋ ಅನಗತ್ಯ ಹಾಗೂ ನೈಜತೆಯಿಲ್ಲದ ಮಾಹಿತಿಗಳು ಹರಿದಾಡುತ್ತಿದ್ದು, ಅವುಗಳನ್ನು ತನಿಖೆಯಲ್ಲಿ ಸಾಕ್ಷ್ಯವನ್ನಾಗಿಸಿ, ಅಳವಡಿಸಿಕೊಳ್ಳಲು ಬರುವುದಿಲ್ಲ. ಆದರೆ ತಾವು ಕಲಬುರ್ಗಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಆಡಿಯೋ ಕ್ಲಿಪಿಂಗ್ ಹಾಜರು ಪಡಿಸಿ, ತಮ್ಮ ಬಳಿ ಇನ್ನೂ ಸಾಕ್ಷ್ಯಾಧಾರಗಳು ಇವೆ ಎಂದು ಹೇಳಿದ್ದನ್ನು ಗಮನಿಸಲಾಗಿದೆ. ತಾವು ಅವುಗಳನ್ನು ಹಾಜರು ಪಡಿಸುವ ಮೊದಲು, ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿದ ನಂತರ

ಮಾಧ್ಯಮದವರ ಮುಂದೆ ಹಾಜರುಪಡಿಸಿರುತ್ತೀರಿ ಎಂದು ಭಾವಿಸಿ, ಸದರಿ ನೋಟೀಸ್ ಅನ್ನು ನೀಡಲಾಗಿತ್ತು ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಜವಾಬ್ದಾರಿಯುತ ಮತ್ತು ಗೌರವಾನ್ವಿತ ಶಾಸಕರಾದ ತಾವು, ಈ ನೋಟಿಸ್ ಮುಟ್ಟಿದ ಎರಡು ದಿನಗಳೊಳಗಾಗಿ ಕೆಳಗೆ ಸಹಿ ಮಾಡಿದ ಸಹಾಯಕ ತನಿಖಾಧಿಕಾರಿಯವರ ಮುಂದೆ, ಹಾಜರಾಗಿ, ಪ್ರಕರಣದ ತನಿಖೆಗೆ ಸಹಾಯವಾಗಬಹುದಾದ ತಮ್ಮ ಬಳಿಯಿರುವಂತ ದಾಖಲಾತಿ ಹಾಗೂ ಮಾಹಿತಿಯನ್ನು ಹಾಜರುಪಡಿಸಲು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು