8:50 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಪಿಎಸ್‌ಐ ನೇಮಕಾತಿ ಹಗರಣ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿ ಮತ್ತೆ ನೋಟಿಸ್

05/05/2022, 10:38

ಬೆಂಗಳೂರು(reporterkarnataka.com): ಪಿಎಸ್‌ಐ ನೇಮಕಾತಿ ಅಕ್ರಮದ ವಿಚಾರಣೆಗೆ ಸಂಬಂಧಿಸಿದಂತೆ ಹಾಜರಾಗಲು ಶಾಸಕ ಪ್ರಿಯಾಂಕ ಖರ್ಗೆಗೆ ಸಿಐಡಿ ಮತ್ತೆ ನೋಟಿಸ್ ಜಾರಿಗೊಳಿಸಿದೆ.

ಪ್ರಿಯಾಂಕ ಖರ್ಗೆ ಅವರಿಗೆ ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಈಗಾಗಲೇ ಎರಡು ಬಾರಿ ಸಿಐಡಿ ನೋಟಿಸ್ ಜಾರಿಗೊಳಿಸಿತ್ತು. ಖರ್ಗೆ ಲಿಖಿತ ಉತ್ತರ ಕೂಡ ನೀಡಿದ್ದರು.

ಆದರೆ ಪ್ರಕರಣದಲ್ಲಿ ನೀವು ಸಲ್ಲಿಸಿರುವ ಉತ್ತರದಲ್ಲಿ ಪ್ರಕರಣಕ್ಕೆ ಸಂಬಂಧವಿಲ್ಲದ ಸಂಗತಿಗಳಿವೆ. ಹೀಗಾಗಿ ಮತ್ತೆ ತಮ್ಮ ಬಳಿ ಪ್ರಕರಣ ಸಂಬಂಧ ಇರುವಂತ ದಾಖಲಾತಿ, ಮಾಹಿತಿ ಸಲ್ಲಿಸುವಂತೆ ಸಿಐಡಿ ನೋಟಿಸ್ ಜಾರಿಗೊಳಿಸಿದೆ.

ಈ ಬಗ್ಗೆ ಶಾಸಕ ಪ್ರಿಯಾಂಕ್ ಖರ್ಗೆಗೆ ಪಿಎಸ್‌ಐ ನೇಮಕಾತಿ ಅಕ್ರಮದ ತನಿಖೆ ನಡೆಸುತ್ತಿರುವ ಸಿಐಡಿಯ ಸಹಾಯಕ ತನಿಖಾಧಿಕಾರಿ ಹಾಗೂ ಪೊಲೀಸ್ ಉಪಾಧಿಕ್ಷಕ ನರಸಿಂಹಮೂರ್ತಿ ಪಿ ಅವರು ನೋಟಿಸ್ ಜಾರಿ ಮಾಡಿದ್ದು,’ ದಿನಾಂಕ 28-04-2022ರಂದು ಒಂದು ಉತ್ತರವನ್ನು ನೀವು ಸಲ್ಲಿಸಿದ್ದು, ಅದನ್ನು ಪರಿಶೀಲಿಸಿದಾಗ ಅದರಲ್ಲಿ ಪ್ರಕರಣಕ್ಕೆ ಸಂಬಂಧವಿಲ್ಲದ ಸಂಗತಿಗಳು ಕಂಡು ಬಂದಿರುತ್ತವೆ ಎಂದಿದ್ದಾರೆ.

ಸಾರ್ವಜನಿಕ ಜಾಲತಾಣಗಳಲ್ಲಿ ಎಷ್ಟೋ ಅನಗತ್ಯ ಹಾಗೂ ನೈಜತೆಯಿಲ್ಲದ ಮಾಹಿತಿಗಳು ಹರಿದಾಡುತ್ತಿದ್ದು, ಅವುಗಳನ್ನು ತನಿಖೆಯಲ್ಲಿ ಸಾಕ್ಷ್ಯವನ್ನಾಗಿಸಿ, ಅಳವಡಿಸಿಕೊಳ್ಳಲು ಬರುವುದಿಲ್ಲ. ಆದರೆ ತಾವು ಕಲಬುರ್ಗಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಆಡಿಯೋ ಕ್ಲಿಪಿಂಗ್ ಹಾಜರು ಪಡಿಸಿ, ತಮ್ಮ ಬಳಿ ಇನ್ನೂ ಸಾಕ್ಷ್ಯಾಧಾರಗಳು ಇವೆ ಎಂದು ಹೇಳಿದ್ದನ್ನು ಗಮನಿಸಲಾಗಿದೆ. ತಾವು ಅವುಗಳನ್ನು ಹಾಜರು ಪಡಿಸುವ ಮೊದಲು, ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿದ ನಂತರ

ಮಾಧ್ಯಮದವರ ಮುಂದೆ ಹಾಜರುಪಡಿಸಿರುತ್ತೀರಿ ಎಂದು ಭಾವಿಸಿ, ಸದರಿ ನೋಟೀಸ್ ಅನ್ನು ನೀಡಲಾಗಿತ್ತು ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಜವಾಬ್ದಾರಿಯುತ ಮತ್ತು ಗೌರವಾನ್ವಿತ ಶಾಸಕರಾದ ತಾವು, ಈ ನೋಟಿಸ್ ಮುಟ್ಟಿದ ಎರಡು ದಿನಗಳೊಳಗಾಗಿ ಕೆಳಗೆ ಸಹಿ ಮಾಡಿದ ಸಹಾಯಕ ತನಿಖಾಧಿಕಾರಿಯವರ ಮುಂದೆ, ಹಾಜರಾಗಿ, ಪ್ರಕರಣದ ತನಿಖೆಗೆ ಸಹಾಯವಾಗಬಹುದಾದ ತಮ್ಮ ಬಳಿಯಿರುವಂತ ದಾಖಲಾತಿ ಹಾಗೂ ಮಾಹಿತಿಯನ್ನು ಹಾಜರುಪಡಿಸಲು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು