6:54 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಪಿಎಸ್‌ಐ ನೇಮಕಾತಿ ಹಗರಣ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿ ಮತ್ತೆ ನೋಟಿಸ್

05/05/2022, 10:38

ಬೆಂಗಳೂರು(reporterkarnataka.com): ಪಿಎಸ್‌ಐ ನೇಮಕಾತಿ ಅಕ್ರಮದ ವಿಚಾರಣೆಗೆ ಸಂಬಂಧಿಸಿದಂತೆ ಹಾಜರಾಗಲು ಶಾಸಕ ಪ್ರಿಯಾಂಕ ಖರ್ಗೆಗೆ ಸಿಐಡಿ ಮತ್ತೆ ನೋಟಿಸ್ ಜಾರಿಗೊಳಿಸಿದೆ.

ಪ್ರಿಯಾಂಕ ಖರ್ಗೆ ಅವರಿಗೆ ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಈಗಾಗಲೇ ಎರಡು ಬಾರಿ ಸಿಐಡಿ ನೋಟಿಸ್ ಜಾರಿಗೊಳಿಸಿತ್ತು. ಖರ್ಗೆ ಲಿಖಿತ ಉತ್ತರ ಕೂಡ ನೀಡಿದ್ದರು.

ಆದರೆ ಪ್ರಕರಣದಲ್ಲಿ ನೀವು ಸಲ್ಲಿಸಿರುವ ಉತ್ತರದಲ್ಲಿ ಪ್ರಕರಣಕ್ಕೆ ಸಂಬಂಧವಿಲ್ಲದ ಸಂಗತಿಗಳಿವೆ. ಹೀಗಾಗಿ ಮತ್ತೆ ತಮ್ಮ ಬಳಿ ಪ್ರಕರಣ ಸಂಬಂಧ ಇರುವಂತ ದಾಖಲಾತಿ, ಮಾಹಿತಿ ಸಲ್ಲಿಸುವಂತೆ ಸಿಐಡಿ ನೋಟಿಸ್ ಜಾರಿಗೊಳಿಸಿದೆ.

ಈ ಬಗ್ಗೆ ಶಾಸಕ ಪ್ರಿಯಾಂಕ್ ಖರ್ಗೆಗೆ ಪಿಎಸ್‌ಐ ನೇಮಕಾತಿ ಅಕ್ರಮದ ತನಿಖೆ ನಡೆಸುತ್ತಿರುವ ಸಿಐಡಿಯ ಸಹಾಯಕ ತನಿಖಾಧಿಕಾರಿ ಹಾಗೂ ಪೊಲೀಸ್ ಉಪಾಧಿಕ್ಷಕ ನರಸಿಂಹಮೂರ್ತಿ ಪಿ ಅವರು ನೋಟಿಸ್ ಜಾರಿ ಮಾಡಿದ್ದು,’ ದಿನಾಂಕ 28-04-2022ರಂದು ಒಂದು ಉತ್ತರವನ್ನು ನೀವು ಸಲ್ಲಿಸಿದ್ದು, ಅದನ್ನು ಪರಿಶೀಲಿಸಿದಾಗ ಅದರಲ್ಲಿ ಪ್ರಕರಣಕ್ಕೆ ಸಂಬಂಧವಿಲ್ಲದ ಸಂಗತಿಗಳು ಕಂಡು ಬಂದಿರುತ್ತವೆ ಎಂದಿದ್ದಾರೆ.

ಸಾರ್ವಜನಿಕ ಜಾಲತಾಣಗಳಲ್ಲಿ ಎಷ್ಟೋ ಅನಗತ್ಯ ಹಾಗೂ ನೈಜತೆಯಿಲ್ಲದ ಮಾಹಿತಿಗಳು ಹರಿದಾಡುತ್ತಿದ್ದು, ಅವುಗಳನ್ನು ತನಿಖೆಯಲ್ಲಿ ಸಾಕ್ಷ್ಯವನ್ನಾಗಿಸಿ, ಅಳವಡಿಸಿಕೊಳ್ಳಲು ಬರುವುದಿಲ್ಲ. ಆದರೆ ತಾವು ಕಲಬುರ್ಗಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಆಡಿಯೋ ಕ್ಲಿಪಿಂಗ್ ಹಾಜರು ಪಡಿಸಿ, ತಮ್ಮ ಬಳಿ ಇನ್ನೂ ಸಾಕ್ಷ್ಯಾಧಾರಗಳು ಇವೆ ಎಂದು ಹೇಳಿದ್ದನ್ನು ಗಮನಿಸಲಾಗಿದೆ. ತಾವು ಅವುಗಳನ್ನು ಹಾಜರು ಪಡಿಸುವ ಮೊದಲು, ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿದ ನಂತರ

ಮಾಧ್ಯಮದವರ ಮುಂದೆ ಹಾಜರುಪಡಿಸಿರುತ್ತೀರಿ ಎಂದು ಭಾವಿಸಿ, ಸದರಿ ನೋಟೀಸ್ ಅನ್ನು ನೀಡಲಾಗಿತ್ತು ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಜವಾಬ್ದಾರಿಯುತ ಮತ್ತು ಗೌರವಾನ್ವಿತ ಶಾಸಕರಾದ ತಾವು, ಈ ನೋಟಿಸ್ ಮುಟ್ಟಿದ ಎರಡು ದಿನಗಳೊಳಗಾಗಿ ಕೆಳಗೆ ಸಹಿ ಮಾಡಿದ ಸಹಾಯಕ ತನಿಖಾಧಿಕಾರಿಯವರ ಮುಂದೆ, ಹಾಜರಾಗಿ, ಪ್ರಕರಣದ ತನಿಖೆಗೆ ಸಹಾಯವಾಗಬಹುದಾದ ತಮ್ಮ ಬಳಿಯಿರುವಂತ ದಾಖಲಾತಿ ಹಾಗೂ ಮಾಹಿತಿಯನ್ನು ಹಾಜರುಪಡಿಸಲು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು