1:33 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಪಿಎಸ್‌ಐ ನೇಮಕಾತಿ ಹಗರಣ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿ ಮತ್ತೆ ನೋಟಿಸ್

05/05/2022, 10:38

ಬೆಂಗಳೂರು(reporterkarnataka.com): ಪಿಎಸ್‌ಐ ನೇಮಕಾತಿ ಅಕ್ರಮದ ವಿಚಾರಣೆಗೆ ಸಂಬಂಧಿಸಿದಂತೆ ಹಾಜರಾಗಲು ಶಾಸಕ ಪ್ರಿಯಾಂಕ ಖರ್ಗೆಗೆ ಸಿಐಡಿ ಮತ್ತೆ ನೋಟಿಸ್ ಜಾರಿಗೊಳಿಸಿದೆ.

ಪ್ರಿಯಾಂಕ ಖರ್ಗೆ ಅವರಿಗೆ ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಈಗಾಗಲೇ ಎರಡು ಬಾರಿ ಸಿಐಡಿ ನೋಟಿಸ್ ಜಾರಿಗೊಳಿಸಿತ್ತು. ಖರ್ಗೆ ಲಿಖಿತ ಉತ್ತರ ಕೂಡ ನೀಡಿದ್ದರು.

ಆದರೆ ಪ್ರಕರಣದಲ್ಲಿ ನೀವು ಸಲ್ಲಿಸಿರುವ ಉತ್ತರದಲ್ಲಿ ಪ್ರಕರಣಕ್ಕೆ ಸಂಬಂಧವಿಲ್ಲದ ಸಂಗತಿಗಳಿವೆ. ಹೀಗಾಗಿ ಮತ್ತೆ ತಮ್ಮ ಬಳಿ ಪ್ರಕರಣ ಸಂಬಂಧ ಇರುವಂತ ದಾಖಲಾತಿ, ಮಾಹಿತಿ ಸಲ್ಲಿಸುವಂತೆ ಸಿಐಡಿ ನೋಟಿಸ್ ಜಾರಿಗೊಳಿಸಿದೆ.

ಈ ಬಗ್ಗೆ ಶಾಸಕ ಪ್ರಿಯಾಂಕ್ ಖರ್ಗೆಗೆ ಪಿಎಸ್‌ಐ ನೇಮಕಾತಿ ಅಕ್ರಮದ ತನಿಖೆ ನಡೆಸುತ್ತಿರುವ ಸಿಐಡಿಯ ಸಹಾಯಕ ತನಿಖಾಧಿಕಾರಿ ಹಾಗೂ ಪೊಲೀಸ್ ಉಪಾಧಿಕ್ಷಕ ನರಸಿಂಹಮೂರ್ತಿ ಪಿ ಅವರು ನೋಟಿಸ್ ಜಾರಿ ಮಾಡಿದ್ದು,’ ದಿನಾಂಕ 28-04-2022ರಂದು ಒಂದು ಉತ್ತರವನ್ನು ನೀವು ಸಲ್ಲಿಸಿದ್ದು, ಅದನ್ನು ಪರಿಶೀಲಿಸಿದಾಗ ಅದರಲ್ಲಿ ಪ್ರಕರಣಕ್ಕೆ ಸಂಬಂಧವಿಲ್ಲದ ಸಂಗತಿಗಳು ಕಂಡು ಬಂದಿರುತ್ತವೆ ಎಂದಿದ್ದಾರೆ.

ಸಾರ್ವಜನಿಕ ಜಾಲತಾಣಗಳಲ್ಲಿ ಎಷ್ಟೋ ಅನಗತ್ಯ ಹಾಗೂ ನೈಜತೆಯಿಲ್ಲದ ಮಾಹಿತಿಗಳು ಹರಿದಾಡುತ್ತಿದ್ದು, ಅವುಗಳನ್ನು ತನಿಖೆಯಲ್ಲಿ ಸಾಕ್ಷ್ಯವನ್ನಾಗಿಸಿ, ಅಳವಡಿಸಿಕೊಳ್ಳಲು ಬರುವುದಿಲ್ಲ. ಆದರೆ ತಾವು ಕಲಬುರ್ಗಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಆಡಿಯೋ ಕ್ಲಿಪಿಂಗ್ ಹಾಜರು ಪಡಿಸಿ, ತಮ್ಮ ಬಳಿ ಇನ್ನೂ ಸಾಕ್ಷ್ಯಾಧಾರಗಳು ಇವೆ ಎಂದು ಹೇಳಿದ್ದನ್ನು ಗಮನಿಸಲಾಗಿದೆ. ತಾವು ಅವುಗಳನ್ನು ಹಾಜರು ಪಡಿಸುವ ಮೊದಲು, ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿದ ನಂತರ

ಮಾಧ್ಯಮದವರ ಮುಂದೆ ಹಾಜರುಪಡಿಸಿರುತ್ತೀರಿ ಎಂದು ಭಾವಿಸಿ, ಸದರಿ ನೋಟೀಸ್ ಅನ್ನು ನೀಡಲಾಗಿತ್ತು ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಜವಾಬ್ದಾರಿಯುತ ಮತ್ತು ಗೌರವಾನ್ವಿತ ಶಾಸಕರಾದ ತಾವು, ಈ ನೋಟಿಸ್ ಮುಟ್ಟಿದ ಎರಡು ದಿನಗಳೊಳಗಾಗಿ ಕೆಳಗೆ ಸಹಿ ಮಾಡಿದ ಸಹಾಯಕ ತನಿಖಾಧಿಕಾರಿಯವರ ಮುಂದೆ, ಹಾಜರಾಗಿ, ಪ್ರಕರಣದ ತನಿಖೆಗೆ ಸಹಾಯವಾಗಬಹುದಾದ ತಮ್ಮ ಬಳಿಯಿರುವಂತ ದಾಖಲಾತಿ ಹಾಗೂ ಮಾಹಿತಿಯನ್ನು ಹಾಜರುಪಡಿಸಲು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು