9:02 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್‍: ಅಪಘಾತಕ್ಕೀಡಾಗಿ ನಿಂತಿದ್ದ ಕಾರು ಪ್ರಯಾಣಿಕರ ಬೆದರಿಸಿ ನಗ, ನಗದು ಲೂಟಿ:  ಪ್ರಕರಣ ದಾಖಲು

05/05/2022, 20:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟ್ ಅಪಘಾತವಾಗಿದ್ದ ವಾಹನದಲ್ಲಿದ್ದ ಸವಾರರನ್ನು ಬೆದರಿಸಿ ಹಣ, ಉಂಗುರ ಹಾಗೂ ಮೊಬೈಲ್‍ನ್ನು ಕಸಿದುಕೊಂಡು ಹೋಗಿರುವ ಘಟನೆ ನಡೆದಿದ್ದು ಈ ಬಗ್ಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಬೆಂಗಳೂರಿನ ದೇವನಹಳ್ಳಿಯ ಮದುಸೂದನ್ ಎಂಬುವವರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ. ಮೇ 3 ರಂದು ದೇವನಹಳ್ಳಿಯಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ಕಾರಿನಲ್ಲಿ ಹೊರಟಿದ್ದು ಚಾರ್ಮಾಡಿ ಘಾಟ್‍ನಲ್ಲಿ ರಾತ್ರಿ 12-30 ರ ಸುಮಾರಿಗೆ ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಣ್ಣ ಗಾಯಗಳಾಗಿದ್ದು ಅಂಬುಲೆನ್ಸ್ ಗೆ ಕರೆ ಮಾಡಲು ನೆಟ್ ವರ್ಕ್ ಇಲ್ಲದೆ ಇರುವುದರಿಂದ ಕಾರಿನಲ್ಲೆ ಕುಳಿತಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಮೂಡಿಗೆರೆ ಕಡೆಗೆ ಬೈಕ್ ಮತ್ತು ಸ್ಕೂಟರ್ ನಲ್ಲಿ ಬಂದ ಮೂವರು ಯುವಕರ ತಂಡ ಕಾರನ್ನು ಸುತ್ತುವರಿದು 600 ಹಣ, ಮೊಬೈಲ್ ಹಾಗೂ ಉಂಗುರವನ್ನು ಕಸಿದುಕೊಂಡು ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು