12:37 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕಾಗದ ಕೊರತೆಯಿಂದ ಪಠ್ಯಪುಸ್ತಕ ಮುದ್ರಣ ಸ್ಥಗಿತ ? ಶಾಲೆ ಶುರುವಾದ್ರೂ ಪಠ್ಯ ಪುಸ್ತಕ ಬೇಗ ಸಿಗೋದು ಡೌಟು

06/05/2022, 00:12

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com):  ರಾಜ್ಯದಲ್ಲಿ ಶಾಲೆಗಳು ಸಕಾಲದಲ್ಲಿ ಆರಂಭವಾದರೂ ಪಠ್ಯ ಪುಸ್ತಕ ಸಮಯಕ್ಕೆ ಸರಿಯಾಗಿ ಸಿಗುವ ಸಾಧ್ಯತೆ ತೀರಾ ಕಡಿಮೆಯಾಗಿದೆ.

ರಾಜ್ಯದಲ್ಲಿ ಮೇ 16ರಿಂದ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡರೂ ಪ್ರತಿ ವರ್ಷದಂತೆ ಈ ವರ್ಷವೂ ಮಕ್ಕಳ ಕೈಗೆ ನಿಗದಿತ ಅವಧಿಯೊಳಗೆ ಪಠ್ಯಪುಸ್ತಕಗಳು ತಲುಪುವುದು ಅನುಮಾನವೆನ್ನಲಾಗಿದೆ. ಮುದ್ರಣ ಕಾಗದದ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳ ಕಾರಣದಿಂದಾಗಿ ರಾಜ್ಯದಲ್ಲಿ ಹಲವಾರು ಪಠ್ಯಪುಸ್ತಕ ಮುದ್ರಣಾಲಯಗಳು ತಾತ್ಕಾಲಿಕವಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿವೆ ಎನ್ನಲಾಗಿದೆ.

ರಷ್ಯಾ -ಉಕ್ರೇನ್ ಯುದ್ಧದ ಪರಿಣಾಮ ಜಾಗತಿಕ ಮಟ್ಟದಲ್ಲಿ ಮುದ್ರಣ ಕಾಗದ ಕೊರತೆ ಕಂಡುಬಂದಿದೆ. ಇದರಿಂದ ಭಾರತದಲ್ಲಿಯೂ ಮುದ್ರಣ ಕಾಗದ ತಯಾರಿಸುವ ಕಾರ್ಖಾನೆಗಳ ಮೇಲೆ ಪರಿಣಾಮ ಉಂಟಾಗಿದೆ. ರಾಜ್ಯದಲ್ಲಿ ಪಠ್ಯ ಪುಸ್ತಕ ಮುದ್ರಣ ಮಾಡುವ ಮುದ್ರಕರಿಗೆ ಮುದ್ರಣ ಕಾಗದ ಕೊರತೆ ಎದುರಾಗಿದೆ. ಹೀಗಾಗಿ ನಿಗದಿತ ಅವಧಿಯೊಳಗೆ ಪಠ್ಯ ಪುಸ್ತಕಗಳನ್ನು ಮುದ್ರಿಸಿ ತಲುಪಿಸುವುದು ಮುದ್ರಕರಿಗೆ ಕಷ್ಟಸಾಧ್ಯವಾಗಿದೆ. ಬೇಡಿಕೆಯಷ್ಟು ಮುದ್ರಣ ಕಾಗದ ಪೂರೈಕೆಯಾಗದೆ ಇರುವುದರಿಂದ ಪಠ್ಯಪುಸ್ತಕಗಳನ್ನು ಮುದ್ರಿಸಲು ಸಾಧ್ಯವಾಗದೆ ಅನೇಕರು ತಾತ್ಕಾಲಿಕವಾಗಿ ಮುದ್ರಣ ಸ್ಥಗಿತಗೊಳಿಸಿದ್ದಾರೆ.

ಕರ್ನಾಟಕ ಪಠ್ಯಪುಸ್ತಕ ಮುದ್ರಕರ ಸಂಘದ ಅಧ್ಯಕ್ಷ ಬಿ.ಆರ್. ಸತ್ಯಕುಮಾರ್ ಅವರು, ಪರಿಸ್ಥಿತಿ ಸುಧಾರಿಸದಿದ್ದರೆ ಪಠ್ಯಪುಸ್ತಕ ಪೂರೈಕೆಯ ಮೇಲೆ ಪರಿಣಾಮ ಉಂಟಾಗಲಿದೆ. ಶೇಕಡ 50 ರಷ್ಟು ಮುದ್ರಣ ಕಾರ್ಯ ಪೂರ್ಣಗೊಂಡಿದೆ. ಕಾಗದ ಸರಬರಾಜು ನಿಯಮಿತವಾಗಿ ಪೂರೈಕೆಯಾದಲ್ಲಿ ಶೈಕ್ಷಣಿಕ ವರ್ಷಕ್ಕೆ ಶಾಲೆಗಳು ತೆರೆಯುವ ವೇಳೆಗೆ ಮುದ್ರಣ ಪೂರ್ಣಗೊಳಿಸಿ ಪಠ್ಯಪುಸ್ತಕ ಪೂರೈಕೆ ಮಾಡಬಹುದಾಗಿದೆ. ಆದರೆ, ಮುದ್ರಣ ಕಾಗದ ಬೆಲೆ ಶೇಕಡ 40 ರಷ್ಟು ಹೆಚ್ಚಾಗಿದೆ. ಪಠ್ಯಪುಸ್ತಕ ಮುದ್ರಕರು ಟೆಂಡರ್ ಕರೆದಾಗ ಪ್ರತಿಟನ್ ಗೆ 60 ಸಾವಿರ ರೂ. ಇದ್ದ ಮುದ್ರಣ ಕಾಗದ ದರ 90 ಸಾವಿರ ರೂ.ಗೆ ತಲುಪಿದೆ.

ರಾಜ್ಯದಲ್ಲಿ ಪಠ್ಯಪುಸ್ತಕಗಳನ್ನು ಮುದ್ರಿಸುವ ಸುಮಾರು 21 ಘಟಕಗಳಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತಮಿಳುನಾಡು ಸರ್ಕಾರಿ ಸ್ವಾಮ್ಯದ ಕಾಗದ ಕಾರ್ಖಾನೆಯಿಂದ ರಾಜ್ಯಕ್ಕೆ ಕಾಗದ ಪೂರೈಕೆ ಮಾಡಲು ಕ್ರಮ ಕೈಗೊಂಡಲ್ಲಿ ಸಮಸ್ಯೆಗೆ ಪರಿಹಾರ ಸಿಗಬಹುದು ಎಂದು ಹೇಳಲಾಗಿದೆ.

ಕರ್ನಾಟಕ ಪಠ್ಯಪುಸ್ತಕ ಸೊಸೈಟಿ ನೀಡಿರುವ ಮಾಹಿತಿಯಂತೆ, ಶೇಕಡಾ 64 ರಷ್ಟು ಪಠ್ಯಪುಸ್ತಕಗಳ ಮುದ್ರಣವಾಗಿದ್ದು, 57ರಷ್ಟು ಪಠ್ಯಪುಸ್ತಕಗಳನ್ನು ವಿತರಣೆಗೆ ತಲುಪಿಸಲಾಗಿದೆ. ಮೇ 16ರಿಂದ 20ರೊಳಗೆ ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ತಲುಪಿಸಲು ವ್ಯವಸ್ಥೆ ಮಾಡಲಾಗಿದೆ ಎನ್ನಲಾಗಿದೆ. ಆದರೆ, ಮುದ್ರಣ ಕಾಗದ ಪೂರೈಕೆಯಾಗದೇ ಮುದ್ರಕರು ಮುದ್ರಣ ಕಾರ್ಯ ತಾತ್ಕಾಲಿಕವಾಗಿ ನಿಲ್ಲಿಸಿರುವುದರಿಂದ ನಿಗದಿತ ವೇಳೆಗೆ ಪಠ್ಯ ಪುಸ್ತಕ ಪೂರೈಕೆಯಾಗುವುದು ಅನುಮಾನವೆನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು