4:14 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಪೊಲೀಸ್ ಗೆ ಆವಾಜ್: ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಲೀಕ್

06/05/2022, 08:39

ಚಿಕ್ಕಮಗಳೂರು(reporterkarnataka.com) : ಮೂಡಿಗೆರೆ  ಶಾಸಕ ಎಂ. ಪಿ. ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಬಹಿರಂಗವಾಗಿದೆ. ಕುಮಾರಸ್ವಾಮಿ ಹಾಗೂ ಪೊಲೀಸರ ಮಧ್ಯೆ ನಡೆದ ಸಂಭಾಷಣೆಯ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ .

ಕಾಕತಾಳೀಯ ಎನ್ನುವಂತೆ ಸಚಿವ ಸಂಪುಟ ವಿಸ್ತರಣೆಯ ಮಾತುಗಳು ಕೇಳಿಬರುತ್ತಿರುವ ಬೆನ್ನ ಹಿಂದೆ ಈ ಆಡಿಯೋ ಲೀಕ್ ಆಗಿರುವುದು ವಿಶೇಷ .

ಈ ಹಿಂದೆಯೂ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಾಸಕರು ಆಡಿದ ಕೆಲವು ವಿಡಿಯೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿತ್ತು. ಕೆಲ ವಿವಾದಗಳು ನಡೆದಿದ್ದವು .

ಆಡಿಯೋದಲ್ಲಿ ಏನಿದೆ ?

ಶಾಸಕ : ಹಲೋ ಯಾರಪ್ಪಾ ಇದು ನಂಬರು ?

ಪೋಲಿಸ್ : ನಾನು ರವೀಶ್ ಮಾತಾಡೋದು ಸಾರ್ 

ಶಾಸಕ :ಈಗ ಎಲ್ಲಿದ್ದೀಯಪ್ಪ ನೀನು 

ಪೊಲೀಸ್ :ಸ್ಟೇಷನ್ ನಲ್ಲಿ ಸಾರ್

ಶಾಸಕ :ಇಲ್ಲಿಗೆ ಬರ್ಬೇಡ ಅಂದಿದ್ನಲ್ಲ ನಾನು 

ಪೊಲೀಸ್ :  ಐಜಿ ಸಾರ್ ತಗೋ ಅಂತ ಹೇಳಿದ್ರು ಸಾರ್ 

ಶಾಸಕ : ವಾಪಸ್ ಹೊಗಲೇ.. ಮರ್ಯಾದೆಯಿಂದ ವಾಪಸ್ ಹೋಗು

ಪೊಲೀಸ್ : ನಾಳೆ ಬಂದ್ ನಿಮ್ಮನ್ನಾ  ಕಾಣ್ತೀನಿ  

 ಶಾಸಕ : ನನಗೆ ವಾಪಸ್ ಕಳಿಸುವುದು ಗೊತ್ತು ಯಾರ್ಯಾರಿಗೆ ಎಷ್ಟೆಷ್ಟು ಕೊಟ್ಟಿದ್ದೀಯಾ ಎಲ್ಲಾ ಗೊತ್ತು ,

ಪೊಲೀಸ್ : ಇಲ್ಲ ಸಾರ್ ಯಾರಿಗೂ ಏನೂ ಕೊಟ್ಟಿಲ್ಲ ಐಜಿ ಹೇಳಿದ್ರು ಅಷ್ಟೆ 

ಶಾಸಕ : ಯಾವನ್ ಐಜಿ ?  ಮೂಡಿಗೆರೆಗೆ ನಾನೇ ದೊಡ್ಡವನು .ಮರ್ಯಾದೆಯಿಂದ ವಾಪಸ್ ಹೋಗು.(ಇಲ್ಲ ಸಾರ್ ನಾಳೆ ಬಂದು ಕಾಣುತ್ತೇನೆ )ಬಂದ ದಾರಿಯಲ್ಲೇ ವಾಪಸ್ ಹೋಗು

ಇತ್ತೀಚಿನ ಸುದ್ದಿ

ಜಾಹೀರಾತು