2:57 AM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಮದುವೆ ಮನೆಯಿಂದ ಬಾಲಕಿ ಅಪಹರಿಸಿ ಮದುವೆಯಾದ ಮಂಡ್ಯ ಯುವಕನ ಬಂಧನ

06/05/2022, 21:05

ಮೈಸೂರು(reporterkarnataka.com): ಇದೆಲ್ಲ ಸಿನಿಮಾದಲ್ಲಿ ನಡೆದಂತೆ ಘಟಿಸಿದ ಹೋಗಿದೆ. ಮದುವೆ ಮನೆಗೆ ಆಗಮಿಸಿದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ

ಮದುವೆಯಾಗಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಸಂಬಂಧಿಕರ ಮದುವೆಗೆಂದು ತನ್ನ ಪೋಷಕರೊಂದಿಗೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿರುವ ಶಿವಮ್ಮಮಹದೇವಪ್ಪ ಕಲ್ಯಾಣ ಮಂಟಪಕ್ಕೆ ಬಂದು ತಂಗಿದ್ದ ಬಾಲಕಿಯನ್ನು ಮಂಡ್ಯ ಜಿಲ್ಲೆಯ ಬೇಲೂರು ಗ್ರಾಮದ ಪ್ರತಾಪ್ ಅಪಹರಿಸಿಕೊಂಡು ಹೋಗಿದ್ದ.

ಗಾಬರಿಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ತಕ್ಷಣವೇ ಕಾರ್ಯಚರಣೆ ನಡೆಸಿದ ಮೈಸೂರಿನ ವಿವಿಪುರಂ ಠಾಣೆಯ ಪೊಲೀಸರು, ತನಿಖೆ ನಡೆಸಿದಾಗ, ಮಂಡ್ಯ ಜಿಲ್ಲೆ ಬೇಲೂರು ಗ್ರಾಮದ ಪ್ರತಾಪ್ ಅಪ್ರಾಪ್ತೆಯನ್ನ ಅಪಹರಿಸಿಕೊಂಡು ಹೋಗಿ ಮಂಡ್ಯದ ಸಬ್ ರಿಜಿಸ್ಟಾರ್ ಕಚೇರಿಯಲ್ಲಿ ಮದುವೆಯಾಗಿರುವುದು ಪತ್ತೆಯಾಯಿತು. ಕೂಡಲೇ ಆತನನ್ನು ಬಂಧಿಸಿದ ಪೊಲೀಸರು, ಅಪಹರಣಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ತೆಗೆದುಕೊಂಡು, ಬಾಲಕಿಯನ್ನು ರಕ್ಷಿಸಿ, ಬಾಲಮಂದಿರದ ವಶಕ್ಕೆ ಆಕೆಯನ್ನು ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು