5:01 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮದುವೆ ಮನೆಯಿಂದ ಬಾಲಕಿ ಅಪಹರಿಸಿ ಮದುವೆಯಾದ ಮಂಡ್ಯ ಯುವಕನ ಬಂಧನ

06/05/2022, 21:05

ಮೈಸೂರು(reporterkarnataka.com): ಇದೆಲ್ಲ ಸಿನಿಮಾದಲ್ಲಿ ನಡೆದಂತೆ ಘಟಿಸಿದ ಹೋಗಿದೆ. ಮದುವೆ ಮನೆಗೆ ಆಗಮಿಸಿದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ

ಮದುವೆಯಾಗಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಸಂಬಂಧಿಕರ ಮದುವೆಗೆಂದು ತನ್ನ ಪೋಷಕರೊಂದಿಗೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿರುವ ಶಿವಮ್ಮಮಹದೇವಪ್ಪ ಕಲ್ಯಾಣ ಮಂಟಪಕ್ಕೆ ಬಂದು ತಂಗಿದ್ದ ಬಾಲಕಿಯನ್ನು ಮಂಡ್ಯ ಜಿಲ್ಲೆಯ ಬೇಲೂರು ಗ್ರಾಮದ ಪ್ರತಾಪ್ ಅಪಹರಿಸಿಕೊಂಡು ಹೋಗಿದ್ದ.

ಗಾಬರಿಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ತಕ್ಷಣವೇ ಕಾರ್ಯಚರಣೆ ನಡೆಸಿದ ಮೈಸೂರಿನ ವಿವಿಪುರಂ ಠಾಣೆಯ ಪೊಲೀಸರು, ತನಿಖೆ ನಡೆಸಿದಾಗ, ಮಂಡ್ಯ ಜಿಲ್ಲೆ ಬೇಲೂರು ಗ್ರಾಮದ ಪ್ರತಾಪ್ ಅಪ್ರಾಪ್ತೆಯನ್ನ ಅಪಹರಿಸಿಕೊಂಡು ಹೋಗಿ ಮಂಡ್ಯದ ಸಬ್ ರಿಜಿಸ್ಟಾರ್ ಕಚೇರಿಯಲ್ಲಿ ಮದುವೆಯಾಗಿರುವುದು ಪತ್ತೆಯಾಯಿತು. ಕೂಡಲೇ ಆತನನ್ನು ಬಂಧಿಸಿದ ಪೊಲೀಸರು, ಅಪಹರಣಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ತೆಗೆದುಕೊಂಡು, ಬಾಲಕಿಯನ್ನು ರಕ್ಷಿಸಿ, ಬಾಲಮಂದಿರದ ವಶಕ್ಕೆ ಆಕೆಯನ್ನು ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು