12:35 AM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ನಕಲಿ ದಾಖಲೆ ಸೃಷ್ಟಿಸಿ ವೃದ್ಧರ ಜಮೀನು ಲಪಟಾಯಿಸಲು ಯತ್ನ: ಮಹಿಳೆ ಸೇರಿದಂತೆ ಇಬ್ಬರ ಬಂಧನ; ಇನ್ನೊರ್ವ ಆರೋಪಿಗಾಗಿ ಶೋಧ

06/05/2022, 23:33

ಮಂಗಳೂರು(reporterkarnataka.com): ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಹಿರಿಯ ನಾಗರಿಕರೊಬ್ಬರಿಗೆ ಸೇರಿದ ಜಮೀನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೆನ್ ಕ್ರೈಂ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಅಶೋಕ ಕುಮಾರ್(47) ಹಾಗೂ ರೇಷ್ಮಾ ವಾಸುದೇವ್ ನಾಯಕ್( 36) ಎಂದು ಗುರುತಿಸಲಾಗಿದೆ.

ಮಂಗಳೂರು ನಗರ ಸೆನ್  ಕ್ರೈಂ ಪೊಲೀಸ್ ಠಾಣಾ ಮೊ.ನಂ.45/2022 ಕಲಂ: 406, 409, 417, 420, 465, 468, 471, 120(ಬಿ) ಜೊತೆಗೆ 34 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಫಿರ್ಯಾದಿದಾರರ ಸಹಿಯನ್ನು ನಕಲಿಯಾಗಿ ಬಳಸಿ, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.

ನಕಲಿ ದಾಖಲೆಪತ್ರಗಳಲ್ಲದೆ ಸಹಿಯನ್ನೂ ನಕಲುಗೊಳಿಸಿ ವೃದ್ಧರೊಬ್ಬರಿಗೆ ಸೇರಿದ ಜಮೀನನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿರುವ ಮಂಗಳೂರು ನಗರ ಸೆನ್ ಪೊಲೀಸರು ಶುಕ್ರವಾರ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮೂಲತಃ ಬೆಂಗಳೂರಿನ ನಿವಾಸಿಯಾದ ಪ್ರಸ್ತುತ ಬಜ್ಪೆ ಸಮೀಪದ ಕೊಂಪದವಿನಲ್ಲಿ ವಾಸವಾಗಿರುವ ಕ್ರಿಸ್ಟಿನ್ ಎಡ್ವಿನ್ ಜೋಸೆಫ್ ಗೊನ್ಸಾಲ್ವಿಸ್ (84) ಎಂಬವರಿಗೆ ಸೇರಿದ ಜಮೀನನ್ನು ಖರೀದಿಸುವ ನೆಪದಲ್ಲಿ ಕಬಳಿಸಿದ ಆರೋಪದ ಮೇರೆಗೆ ಉಡುಪಿಯ ಅಶೋಕ್ ಕುಮಾರ್ ಮತ್ತು ರೇಷ್ಮಾ ವಾಸುದೇವ ನಾಯಕ್‌ರನ್ನು ಮಂಗಳೂರು ಸೆನ್ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ರಾಮ ಪೂಜಾರಿಯ ಬಂಧನ ಇನ್ನಷ್ಟೆ ಆಗಬೇಕಿದೆ. ಮೂವರ ವಿರುದ್ಧ ನಕಲಿ ದಾಖಲೆ ಮತ್ತು ನಕಲಿ ಸಹಿ ಮಾಡಿ ವಂಚಿಸಿದ ಬಗ್ಗೆ ಎಫ್‌ಐಆರ್ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು