10:29 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕರ್ನಾಟಕದ ಮಹಿಳಾ ಸೀನಿಯರ್ ಹಾಕಿ ತಂಡ: ಕೊಡಗಿನ ಮರದಾಳು ಯಶಿಕ ಆಯ್ಕೆ

07/05/2022, 07:37

ಮಡಿಕೇರಿ(reporterkarnataka.com): ಮಧ್ಯಪ್ರದೇಶದ ಭೂಪಾಲ್ ನಲ್ಲಿ ಆರಂಭಗೊಂಡಿರುವ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕದ ಮಹಿಳಾ ಸೀನಿಯರ್ ಹಾಕಿ ತಂಡವನ್ನು ಕೊಡಗಿನ ಮರದಾಳು ಯಶಿಕ ಪ್ರತಿನಿಧಿಸುತ್ತಿದ್ದಾರೆ.

8ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಗಲೇ ಯಶಿಕ ಮೊದಲ ಪಂದ್ಯವನ್ನು ಜಾರ್ಖಂಡ್ ನ ಕರಾಚಿಯಲ್ಲಿ ಆಡಿದ್ದರು. ನಂತರದ ದಿನಗಳಲ್ಲಿ ದೆಹಲಿ, ಪಂಜಾಬ್, ಒರಿಸ್ಸಾ, ತಮಿಳುನಾಡು, ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಹೆಚ್ಚು ಬಾರಿ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿದ್ದಾರೆ. ಇಲ್ಲಿಯವರೆಗೆ ಸುಮಾರು 63 ಕ್ಕಿಂತ ಅಧಿಕ ಪದಕಗಳನ್ನು ಗೆದ್ದಿದ್ದಾರೆ. ನಾಯಕಿಯಾಗಿಯೂ ಒಂದು ವರ್ಷ ಕಾಲ ಕರ್ನಾಟಕ ತಂಡವನ್ನು ಮುನ್ನಡೆಸಿದ್ದಾರೆ.

2020ರಲ್ಲಿ ಚೆನ್ನೈನಲ್ಲಿ ನಡೆದ ಸೌತ್ಜೋನ್ ಕ್ರೀಡಾಕೂಟ, ಪೊನ್ನಂಪೇಟೆಯಲ್ಲಿ ನಡೆದ ವಿಶ್ವ ವಿದ್ಯಾನಿಲಯ ಮಟ್ಟದ ಸೌತ್ ಜೋನ್ ಪಂದ್ಯಾವಳಿಯಲ್ಲಿ ಇವರು ಪ್ರತಿನಿಧಿಸಿದ್ದ ಜಯ ಸಾಧಿಸಿದೆ. ರಾಜಸ್ಥಾನದಲ್ಲಿ ನಡೆದ ಆಲ್ ಇಂಡಿಯಾ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಯಶಿಕ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಮೈಸೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ್ದು, ತಂಡ ಬೆಳ್ಳಿ ಪದಕ ಪಡೆದುಕೊಂಡಿದೆ. ಈ ಪಂದ್ಯಾವಳಿಯಲ್ಲಿ ಇವರು ದಾಖಲೆಯ 8 ಗೋಲುಗಳನ್ನು ಬಾರಿಸಿ ಯಶಸ್ವೀ ಹಾಕಿಪಟು ಎನಿಸಿಕೊಂಡಿದ್ದಾರೆ.

ಫಾರವರ್ಡ್ ಆಟಗಾರ್ತಿ ಮತ್ತು ಮುಖ್ಯ ಸ್ಟೈಕರ್ ಆಗಿ ಪ್ರತಿನಿಧಿಸಿಯೂ ಯಶಸ್ವಿಯಾಗಿದ್ದಾರೆ. ಇಲ್ಲಿಯವರೆಗೆ ಯಶಿಕ ಒಟ್ಟು 45 ಕ್ಕೂ ಹೆಚ್ಚು ಗೋಲುಗಳನ್ನು ದಾಖಲಿಸಿದ್ದಾರೆ.

ಚೇರಳ ಗ್ರಾಮ (ನೆಲ್ಲಿಹಡ್ಲು) ಚೆಟ್ಟಳ್ಳಿ ನಿವಾಸಿ ಮರದಾಳು ಗೋಪಾಲ (ವಿಠಲ) ಹಾಗೂ ನಾಗರತ್ನ ಅವರ ಪುತ್ರಿ ಮರದಾಳು ಯಶಿಕ ಚೆಟ್ಟಳ್ಳಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 7ನೇ ತರಗತಿಯವರೆಗೆ ವ್ಯಾಸಂಗ ಮಾಡಿದರು. ನಂತರ ಪೊನ್ನಂಪೇಟೆ ಸಾಯಿ ಹಾಕಿ ಕೇಂದ್ರಕ್ಕೆ ಸೇರ್ಪಡೆಯಾಗಿ 8 ರಿಂದ 10 ನೇ ತರಗತಿವರೆಗೆ ಪೂರೈಸಿದರು. ಮೈಸೂರಿನ ಟೆರೇಸ್ಸನ್ ಕಾಲೇಜಿನಲ್ಲಿ ಪಿಯುಸಿ ಮುಗಿಸಿ ಬಿಎ ವಿದ್ಯಾಭ್ಯಾಸದ ಜೊತೆಗೆ ಹಾಕಿ ಪಂದ್ಯಾವಳಿಗೆ ಯಶಿಕ ತಮ್ಮ ಸಮಯವನ್ನು ಮೀಸಲಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು