10:02 PM Sunday21 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರ್ಪಡೆ: ಇದೀಗ ಚೆಂಡು ಬಿಜೆಪಿ ರಾಜ್ಯ ನಾಯಕರ ಅಂಗಳಕ್ಕೆ

07/05/2022, 13:50

ಉಡುಪಿ(reporterkarnataka.com):  ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ಸೇರ್ಪಡೆ ಕುರಿತು ರಾಜ್ಯ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳುವರು ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಜಿಲ್ಲಾ ಘಟಕದ ಅಭಿಪ್ರಾಯವನ್ನು ರಾಜ್ಯ ನಾಯಕರಿಗೆ ತಿಳಿಸಲಾಗಿದೆ. ಕಾರ್ಯಕರ್ತ ರೊಂದಿಗೆ ಸಮಾಲೋಚಿಸಿ ನಾವು ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ ಎಂದು ನುಡಿದರು.

ರಾಜ್ಯ ನಾಯಕರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೂ ನಮ್ಮ ಸಂಪೂರ್ಣ ಬೆಂಬಲವಿದೆ. ಪ್ರಮೋದ್ ಅವರನ್ನು ಪಕ್ಷಕ್ಕೆ ಸೇರಿಸಬೇಕೇ ಅಥವಾ ಬೇಡವೇ ಎಂಬ ಅಂತಿಮ ತೀರ್ಮಾನವನ್ನು ರಾಜ್ಯ ನಾಯಕರು ಕೈಗೊಳ್ಳುವರು ಎಂದು ಸುರೇಶ್ ನಾಯಕ್ ತಿಳಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಜಿಲ್ಲಾಧ್ಯಕ್ಷರು, ಕಾರ್ಕಳ ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಕುಮಾರ್ ಶೆಟ್ಟಿ ಅವರು ಪಕ್ಷಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆ ಬಗ್ಗೆ ತನಗೆ ಯಾವುದೇ ಮಾಹಿತಿ ಇಲ್ಲ ಎಂದು ನುಡಿದರು.

ಬಿಜೆಪಿ ತತ್ವ, ಸಿದ್ಧಾಂತವನ್ನು ಒಪ್ಪಿ ಬರುವ ಯಾರನ್ನೇ ಆದರೂ ಪಕ್ಷ ಸ್ವಾಗತಿಸುತ್ತದೆ. ಅದು ಪ್ರಮೋದ್ ಮಧ್ವರಾಜ್ ಇರಬಹುದು ಅಥವಾ ಇನ್ಯಾರೇ ಆಗಿರಬಹುದು ಎಂದರು.

ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಅವರು,ಬಿಜೆಪಿ ಎಂದೂ ಕಾಂಗ್ರೆಸ್ ಆಗಲು ಸಾಧ್ಯವಿಲ್ಲ. ಬಿಜೆಪಿ ಗಟ್ಟಿಯಾದ ಸಿದ್ದಾಂತವನ್ನು ಹೊಂದಿದೆ. ಈ ಸಿದ್ಧಾಂತದ ಚೌಕಟ್ಟನ್ನು ಮೀರಿ ಯಾವ ನಾಯಕರೂ ಬೆಳೆಯಲು ಸಾಧ್ಯವಿಲ್ಲ. ನಮ್ಮ ಪಕ್ಷ ಎಂದೂ ವ್ಯಕ್ತಿ, ಕುಟುಂಬ ಆಧಾರಿತ ಪಕ್ಷವಾಗಲು ಸಾಧ್ಯವಿಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು