2:37 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ’: ಏಪ್ರಿಲ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಮೇಘನಾ ರಾವ್ ಹಾಗೂ ದೀಕ್ಷ್ಣಕಲ್ಮಾಡಿ ಆಯ್ಕೆ

07/05/2022, 17:45

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಏಪ್ರಿಲ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಮೇಘನಾ ವಿ. ರಾವ್ ಹಾಗೂ ದೀಕ್ಷ್ಣಎನ್ . ಕಲ್ಮಾಡಿ ಆಯ್ಕೆಗೊಂಡಿದ್ದಾರೆ.

ಪಾಣೆಮಂಗಳೂರು ನಿವಾಸಿಯಾದ ವೆಂಕಟೇಶ್ ರಾವ್ ಬಿ. ಹಾಗೂ ರಶ್ಮಿ ವಿ. ರಾವ್ ಅವರ ಪುತ್ರಿಯಾದ ಮೇಘನಾ 7ನೇ ತರಗತಿಯ ವಿದ್ಯಾರ್ಥಿನಿ. ಬಂಟ್ವಾಳದ ಎಸ್. ವಿ.ಎಸ್. ಸ್ಕೂಲ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದಾಳೆ.
ಸಂಗೀತ, ಚಿತ್ರಕಲೆ, ಡ್ಯಾನ್ಸ್ ನಲ್ಲಿ ಆಸಕ್ತಿ ಹೊಂದಿದ್ದಾಳೆ. ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ಆಗಿದ್ದು ಸೀನಿಯರ್ ಕಲಿಯುತ್ತಿದ್ದಾಳೆ. ಗುರುಗಳು ವಿದ್ವಾನ್ ಕೃಷ್ಣ ಆಚಾರ್ಯ ಮತ್ತು ರಜತ ಆಚಾರ್ಯ ಅವರು ಮೇಘನಾಳ ಗುರುಗಳು.
ಸುಗಮ ಸಂಗೀತವನ್ನು ಯಶು ಸ್ನೇಹ ಗಿರಿ ಅವರ ಬಳಿ ಕಲಿಯುತ್ತಿದ್ದಾಳೆ. ಪ್ರತಿಭಾ ಕಾರಂಜಿಯಲ್ಲಿ ನಾಲ್ಕನೇ ತರಗತಿಯಲ್ಲಿ ತಾಲೂಕು ಮಟ್ಟದ ವರೆಗೆ ಹೋಗಿರುತ್ತಾಳೆ. ಸೂಕ್ತ ನ್ಯೂಸ್ ಆಯೋಜಿಸಿರುವ ಗಾನಸಿರಿ ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಚಿನ್ನರ ಲೋಕ ಟ್ರಸ್ಟ್ ಆಯೋಜಿಸಿರುವ ಕರಾವಳಿ ಸರಿಗಮಪ ಸ್ಪರ್ಧೆಯಲ್ಲಿ(2021) ಸೆಮಿಫೈನಲಿಸ್ಟ್ ಆಗಿದ್ದಳು. ವಾಯ್ಸ್ ಆಫ್ ಕಲಾಂಜಲಿ ಜೂನಿಯರ್ ಆಡಿಷನ್ ನಲ್ಲಿ ಸೆಲೆಕ್ಟ್ ಆಗಿ ಮುಂದಿನ ಭಾಗಕ್ಕೆ ಆಯ್ಕೆಯಾಗಿದ್ದಾಳೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಡೆಸಿದ ಜೋಕುಲೆನ ತುಳು ಪದ ರಂಗಿತ ಪಂತ ದಲ್ಲಿ ಪ್ರಥಮ ಬಹುಮಾನವನ್ನು ಪಡೆದಿರುತ್ತಾಳೆ. ಮುಳಿಯ ಗಾನ ರಥ 2021 ಕಾರ್ಯಕ್ರಮದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಮುಂದಿನ ಸುತ್ತಿಗೆ ಆಯ್ಕೆಯಾಗಿರುತ್ತಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು