8:00 PM Friday9 - May 2025
ಬ್ರೇಕಿಂಗ್ ನ್ಯೂಸ್
Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ…

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ’: ಏಪ್ರಿಲ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಮೇಘನಾ ರಾವ್ ಹಾಗೂ ದೀಕ್ಷ್ಣಕಲ್ಮಾಡಿ ಆಯ್ಕೆ

07/05/2022, 17:45

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಏಪ್ರಿಲ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಮೇಘನಾ ವಿ. ರಾವ್ ಹಾಗೂ ದೀಕ್ಷ್ಣಎನ್ . ಕಲ್ಮಾಡಿ ಆಯ್ಕೆಗೊಂಡಿದ್ದಾರೆ.

ಪಾಣೆಮಂಗಳೂರು ನಿವಾಸಿಯಾದ ವೆಂಕಟೇಶ್ ರಾವ್ ಬಿ. ಹಾಗೂ ರಶ್ಮಿ ವಿ. ರಾವ್ ಅವರ ಪುತ್ರಿಯಾದ ಮೇಘನಾ 7ನೇ ತರಗತಿಯ ವಿದ್ಯಾರ್ಥಿನಿ. ಬಂಟ್ವಾಳದ ಎಸ್. ವಿ.ಎಸ್. ಸ್ಕೂಲ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದಾಳೆ.
ಸಂಗೀತ, ಚಿತ್ರಕಲೆ, ಡ್ಯಾನ್ಸ್ ನಲ್ಲಿ ಆಸಕ್ತಿ ಹೊಂದಿದ್ದಾಳೆ. ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ಆಗಿದ್ದು ಸೀನಿಯರ್ ಕಲಿಯುತ್ತಿದ್ದಾಳೆ. ಗುರುಗಳು ವಿದ್ವಾನ್ ಕೃಷ್ಣ ಆಚಾರ್ಯ ಮತ್ತು ರಜತ ಆಚಾರ್ಯ ಅವರು ಮೇಘನಾಳ ಗುರುಗಳು.
ಸುಗಮ ಸಂಗೀತವನ್ನು ಯಶು ಸ್ನೇಹ ಗಿರಿ ಅವರ ಬಳಿ ಕಲಿಯುತ್ತಿದ್ದಾಳೆ. ಪ್ರತಿಭಾ ಕಾರಂಜಿಯಲ್ಲಿ ನಾಲ್ಕನೇ ತರಗತಿಯಲ್ಲಿ ತಾಲೂಕು ಮಟ್ಟದ ವರೆಗೆ ಹೋಗಿರುತ್ತಾಳೆ. ಸೂಕ್ತ ನ್ಯೂಸ್ ಆಯೋಜಿಸಿರುವ ಗಾನಸಿರಿ ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಚಿನ್ನರ ಲೋಕ ಟ್ರಸ್ಟ್ ಆಯೋಜಿಸಿರುವ ಕರಾವಳಿ ಸರಿಗಮಪ ಸ್ಪರ್ಧೆಯಲ್ಲಿ(2021) ಸೆಮಿಫೈನಲಿಸ್ಟ್ ಆಗಿದ್ದಳು. ವಾಯ್ಸ್ ಆಫ್ ಕಲಾಂಜಲಿ ಜೂನಿಯರ್ ಆಡಿಷನ್ ನಲ್ಲಿ ಸೆಲೆಕ್ಟ್ ಆಗಿ ಮುಂದಿನ ಭಾಗಕ್ಕೆ ಆಯ್ಕೆಯಾಗಿದ್ದಾಳೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಡೆಸಿದ ಜೋಕುಲೆನ ತುಳು ಪದ ರಂಗಿತ ಪಂತ ದಲ್ಲಿ ಪ್ರಥಮ ಬಹುಮಾನವನ್ನು ಪಡೆದಿರುತ್ತಾಳೆ. ಮುಳಿಯ ಗಾನ ರಥ 2021 ಕಾರ್ಯಕ್ರಮದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಮುಂದಿನ ಸುತ್ತಿಗೆ ಆಯ್ಕೆಯಾಗಿರುತ್ತಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು