2:01 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಾಂಡ್ ಸೊಭಾಣ್ ಆಯೋಜಿಸಿದ 10 ದಿನಗಳ ‘ಕಿರ್ಣಾಂ’ ಸಮಾರೋಪ: 65 ಶಿಬಿರಾರ್ಥಿಗಳಿಗೆ ಸನ್ಮಾನ ಪತ್ರ 

07/05/2022, 18:10

ಮಂಗಳೂರು(reporterkarnataka.com): ಇಂದು ಶಿಕ್ಷಣದ ಜೊತೆಗೆ ಭಾವನೆಗಳನ್ನು ಗುರುತಿಸುವ, ಗೌರವಿಸುವುದನ್ನು ಕಲಿಯುವ ಅಗತ್ಯವಿದೆ ಎಂದು ಎಂಆರ್ ಪಿ ಎಲ್ ಸಂಸ್ಥೆಯ ಕಾರ್ಪೊರೇಟ್ ಕಮ್ಯುನಿಕೇಶನ್ ವಿಭಾಗದ ಜನರಲ್ ಮ್ಯಾನೇಜರ್ ರುಡಾಲ್ಫ್ ಜೋಯರ್ ನೊ ರೊನ್ಹಾ ಹೇಳಿದರು. 


ಅವರು ಮಾಂಡ್ ಸೊಭಾಣ್ ಆಯೋಜಿಸಿದ ಹತ್ತು ದಿನಗಳ ಕಿರ್ಣಾಂ (ಕಿರಣಗಳು ) ಇದರ ಸಮಾರೋಪ ಸಮಾರಂಭದಲ್ಲಿ 65 ಜನ ಶಿಬಿರಾರ್ಥಿಗಳಿಗೆ ಸನ್ಮಾನ ಪತ್ರ ವಿತರಿಸಿ ಮಾತನಾಡಿದರು. 

ಇದೇ ಸಂದರ್ಭದಲ್ಲಿ ಅವರು ವಿತೊರಿ ಕಾರ್ಕಳ ಶಿಬಿರ ಹೇಗೆ ನಡೆಯಿತು ಎಂಬ ಬಗ್ಗೆ ಮಾಹಿತಿ ನೀಡಿದರು. ಅಮಾನ್ ಕ್ರಿಸ್ ದಾಂತಿ ಮತ್ತು ಹೆಜೆಲ್ ಏಂಜಲ್ ಡಿಸೋಜ ಅವರು ಕೊಂಕಣಿ ಅಂಕಿ ಸಂಖ್ಯೆಗಳನ್ನು ಪ್ರಸ್ತುತ ಪಡಿಸಿದರು. ರಿಯಾ ಮೊಂತೆರೋ, ರಿಶೋನ್ ಸ್ವೀಡ್ ನೊರೊನ್ಹ ಮತ್ತು ಮರ್ಲಿನ್ ವೇಗಸ್ ಶಿಬಿರದ ತಮ್ಮ ಅನುಭವಗಳನ್ನು ಹಂಚಿಕೊಂಡರು. ಪೋಷಕರ ಪರವಾಗಿ ಅನಿತಾ ಲೋಬೊ ಮತ್ತು ರೋನಿ ಕ್ರಾಸ್ತ ಮಾತನಾಡಿದರು. ಮಾಂಡ್ ಸೋಬಾಣ ಅಧ್ಯಕ್ಷ ಲೂವಿ ಪಿಂಟೊ ಶಿಬಿರದ ಸಂಪನ್ಮೂಲ ವ್ಯಕ್ತಿಗಳನ್ನು ಹಾಗೂ ಯಶಸ್ಸಿಗಾಗಿ ದುಡಿದವರನ್ನು ಗೌರವಿಸಿದರು. ಇದೇ ವೇಳೆ ಶಿಬಿರದಲ್ಲಿ  ಉತ್ತಮ ಪ್ರದರ್ಶನ ನೀಡಿದವರಿಗೆ ನಗದು ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ  ಕಾರ್ಯದರ್ಶಿ ಕಿಶೋರ್ ಫರ್ನಾಡಿಸ್ ಮತ್ತು ಕೋಶಾಧಿಕಾರಿ ಎಲ್ರೋನ್ ರೋಡ್ರಿಗಸ್ ಉಪಸ್ಥಿತರಿದ್ದರು. ರೋಲ್ಫ್ ರಶ್ವಿತ್ ಲೋಬೊ ಮತ್ತು ಎಲ್ರಿಶ ರೊಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು. ರೋಂವಿಲ್  ಡಿಸೋಜಾ ವಂದಿಸಿದರು. ಕೊನೆಯಲ್ಲಿ  ತ್ಯಾ ಉಪ್ರಾಂತ್ ಕಿರು ನಾಟಕ ಪ್ರದರ್ಶಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು