8:27 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಗೆ ರಾಜೀನಾಮೆ: ಬಿಜೆಪಿ ಸೇರ್ಪಡೆಗೆ ಕಮಲ ಪಡೆಯ ಗ್ರೀನ್  ಸಿಗ್ನಲ್ ನ ಕಾತರದಲ್ಲಿ ನೇತಾರ

07/05/2022, 20:36

ಉಡುಪಿ(reporterkarnataka.com):  ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಅವರು ತನ್ನ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಿದ್ದಾರೆ. ಉಡುಪಿ ಕಾಂಗ್ರೆಸ್ ನಲ್ಲಿ ತಾನು ಮುಂದುವರಿಯುವ ವಾತಾವರಣ ಇಲ್ಲ. ನನ್ನನ್ನು ಇತ್ತೀಚೆಗೆ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ನೇಮಿಸಿರುವುದಕ್ಕೆ ಧನ್ಯವಾದಗಳು ಎಂದು ಅವರು ತನ್ನ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಇದಕ್ಕೆ ಮುನ್ನ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್  ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ಸೇರ್ಪಡೆ ಕುರಿತು ರಾಜ್ಯ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳುವರು ಎಂದು ಹೇಳಿದ್ದರು.

ಪಕ್ಷದ ಜಿಲ್ಲಾ ಘಟಕದ ಅಭಿಪ್ರಾಯವನ್ನು ರಾಜ್ಯ ನಾಯಕರಿಗೆ ತಿಳಿಸಲಾಗಿದೆ. ಕಾರ್ಯಕರ್ತ ರೊಂದಿಗೆ ಸಮಾಲೋಚಿಸಿ ನಾವು ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ ಎಂದು ಜಿಲ್ಲಾಧ್ಯಕ್ಷರು ನುಡಿದ್ದರು.

ರಾಜ್ಯ ನಾಯಕರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೂ ನಮ್ಮ ಸಂಪೂರ್ಣ ಬೆಂಬಲವಿದೆ. ಪ್ರಮೋದ್ ಅವರನ್ನು ಪಕ್ಷಕ್ಕೆ ಸೇರಿಸಬೇಕೇ ಅಥವಾ ಬೇಡವೇ ಎಂಬ ಅಂತಿಮ ತೀರ್ಮಾನವನ್ನು ರಾಜ್ಯ ನಾಯಕರು ಕೈಗೊಳ್ಳುವರು ಎಂದು ಸುರೇಶ್ ನಾಯಕ್ ತಿಳಿಸಿದ್ದರು.

ಪ್ರಮೋದ್ ಮಧ್ಯರಾಜ್ ಅವರು ಮಾಜಿ ಸಚಿವೆ ಹಾಗೂ ಮಾಜಿ ಸಂಸದೆ ಮನೋರಮಾ ಮಧ್ವರಾಜ್ ಅವರ ಪುತ್ರ. ಮನೋರಮಾ ಅವರು ಡಿ. ದೇವರಾಜ ಅರಸ್, ವೀರೇಂದ್ರ ಪಾಟೀಲ್, ಎಸ್. ಬಂಗಾರಪ್ಪ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಪ್ರಮೋದ್ ಮಧ್ವರಾಜ್ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಉಡುಪಿ ಉಸ್ತುವಾರಿ ಸಚಿವರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು