4:14 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಮಡಿಕೇರಿ: ಹುಲಿಯ ಉಗುರು ಅಕ್ರಮ ಮಾರಾಟ ಯತ್ನ; ಗುಂಡ್ಲುಪೇಟೆಯ ಇಬ್ಬರ ಬಂಧನ

08/05/2022, 08:28

ಮಡಿಕೇರಿ(reporterkarnataka.com): ಹುಲಿಯ 4 ಉಗುರುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ.

ಗುಂಡ್ಲುಪೇಟೆ ಮೂಲದ ಕುಮಾರ ಮತ್ತು ವಿನು ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ.

ಮಡಿಕೇರಿ-ಮೈಸೂರು ರಾಜ್ಯ ಹೆದ್ದಾರಿಯ ಚೈನ್‍ಗೇಟ್ ಬಳಿಯಲ್ಲಿರುವ ಬಸ್ ನಿಲ್ದಾಣದ ಎಡ ಬದಿಯಲ್ಲಿ ಇಬ್ಬರು ಹುಲಿಯ 4 ಉಗುರುಗಳನ್ನು ಅಕ್ರಮವಾಗಿ ಇಟ್ಟುಕೊಂಡು ಅದನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮೇ 6ರಂದು ಮಡಿಕೇರಿ ತಾಲೂಕು ಸಿ.ಐ.ಡಿ ಪೊಲೀಸ್ ಅರಣ್ಯ ಸಂಚಾರಿ ದಳಕ್ಕೆ ಖಚಿತ ಮಾಹಿತಿ ಲಭಿಸಿತ್ತು. ಈ ಸಂದರ್ಭ ಸಿಬ್ಬಂದಿಗಳು ದಾಳಿ ನಡೆಸಿ ಎರಡು ಮಂದಿ ಆರೋಪಿಗಳನ್ನು ಮಾಲು ಸಹಿತ ಬಂಧಿಸಿದ್ದಾರೆ.

ಆರೋಪಿಗಳ ವಶದಲ್ಲಿದ್ದ 4 ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕ ಕೆ.ವಿ.ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಅಧೀಕ್ಷಕ ಎನ್.ಟಿ. ಶ್ರೀನಿವಾಸ್ ರೆಡ್ಡಿ ಮಾರ್ಗದರ್ಶನದಲ್ಲಿ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಉಪ ನಿರೀಕ್ಷಕಿ ಸಿ.ಯು. ಸವಿ, ಸಿಬ್ಬಂದಿಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ, ಸ್ವಾಮಿ ಮತ್ತು ಮಂಜುನಾಥ್ ಅವರುಗಳು ಕಾರ್ಯಾಚರಣೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು