1:00 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಇನ್ನೂ ಅಭಿವೃದ್ಧಿ ಕಾಣದ ಅಶೋಕ ಶಿಲಾಶಾಸನ: ಇಲ್ಲಿಗಾಗಮಿಸಿದ ಪ್ರವಾಸಿಗರಿಗೆ ಸಿಗದು ಗುಟುಕು ಹನಿ ನೀರು!!

08/05/2022, 19:43

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣಕ್ಕೆ ಇತಿಹಾಸದಲ್ಲಿ ಹೆಸರಿದೆ. ಚುನಾವಣೆ ಸಂದರ್ಭದಲ್ಲಿ ಮಸ್ಕಿ ಹೆಸರು ದೆಹಲಿವರೆಗೆ ಮುಟ್ಟಿದೆ. ಪ್ರವಾಸೋದ್ಯಮ ಸಚಿವರೇ ಮಸ್ಕಿ ಪಟ್ಟಣಕ್ಕೆ ಭೇಟಿ ನೀಡಿದ ಮೂಲಭೂತ ಸೌಕರ್ಯದ ಆಶ್ವಾಸನೆ ನೀಡಿದ್ದರು. ಹಾಗೆ ಭೂಮಿ ಪೂಜೆ ನಡೆಸಿದ್ದರು. ಆದರೆ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಮಸ್ಕಿಯ ಅಶೋಕ ಶಿಲಾಶಾಸನ ಅಭಿವೃದ್ಧಿ ಕಾಣದೆ ಹಾಗೇ ಉಳಿದು ಬಿಟ್ಟಿದೆ.

ಅಶೋಕ ಶಿಲಾಶಾಸನ ನೋಡಲು ದೇಶ- ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಇಲ್ಲಿ ಯಾತ್ರಿಕರಿಗೆ ಕುಡಿಯುವ ಶುದ್ಧವಾದ ಒಂದು ಗುಟುಕು ನೀರು ಕೂಡ ಸಿಗುವುದಿಲ್ಲ.

ಇಲ್ಲಿ ವಿಶ್ರಾಂತಿ ಪಡೆಯಲು ಉದ್ಯಾನವೇ ಇಲ್ಲ. ಹೈಟೆಕ್ ಶೌಚಾಲಯ ಇಲ್ಲ. ಸಚಿವರು- ಶಾಸಕರು ಅನೇಕರು ಬಂದು ಭೂಮಿಪೂಜೆ ಮಾಡಿ 
ಹೋದರೂ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ.


ಮಸ್ಕಿ ಶಾಸಕರು ಪ್ರವಾಸೋದ್ಯಮ ಸಚಿವರು, ಮುಖ್ಯಮಂತ್ರಿಗಳಿಗೆ ಗಮನಕ್ಕೆ ತಂದು ಹೈಟೆಕ್ ಉದ್ಯಾನವನ ನಿರ್ಮಿಸಿ  ಶುದ್ಧವಾದ ಕುಡಿಯುವ ನೀರು ಹೈ ಟೆಕ್ ಶೌಚಾಲಯ,ಯಾತ್ರಿಕರಿಗೆ ಯಾತ್ರಿ ನಿವಾಸ್ 
ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.

ಪುರಸಭೆ ಅಧಿಕಾರಿಗಳು ಯಾವುದೇ ಅನುದಾನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಿಲ್ಲ. ಸರಕಾರ ಸಾವಿರಾರು ಕೋಟಿ ಅನುದಾನ ಬರುತ್ತದೆ. ಆದರೆ ಇತಿಹಾಸ ಇತಿಹಾಸ ಇತಿಹಾಸ ಪುಟದಲ್ಲಿ ಮಸ್ಕಿ ಅಶೋಕ ಶಿಲಾಶಾಸನ ಅಭಿವೃದ್ಧಿ ಮಾತ್ರ ಕಂಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು