4:26 AM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಇನ್ನೂ ಅಭಿವೃದ್ಧಿ ಕಾಣದ ಅಶೋಕ ಶಿಲಾಶಾಸನ: ಇಲ್ಲಿಗಾಗಮಿಸಿದ ಪ್ರವಾಸಿಗರಿಗೆ ಸಿಗದು ಗುಟುಕು ಹನಿ ನೀರು!!

08/05/2022, 19:43

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣಕ್ಕೆ ಇತಿಹಾಸದಲ್ಲಿ ಹೆಸರಿದೆ. ಚುನಾವಣೆ ಸಂದರ್ಭದಲ್ಲಿ ಮಸ್ಕಿ ಹೆಸರು ದೆಹಲಿವರೆಗೆ ಮುಟ್ಟಿದೆ. ಪ್ರವಾಸೋದ್ಯಮ ಸಚಿವರೇ ಮಸ್ಕಿ ಪಟ್ಟಣಕ್ಕೆ ಭೇಟಿ ನೀಡಿದ ಮೂಲಭೂತ ಸೌಕರ್ಯದ ಆಶ್ವಾಸನೆ ನೀಡಿದ್ದರು. ಹಾಗೆ ಭೂಮಿ ಪೂಜೆ ನಡೆಸಿದ್ದರು. ಆದರೆ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಮಸ್ಕಿಯ ಅಶೋಕ ಶಿಲಾಶಾಸನ ಅಭಿವೃದ್ಧಿ ಕಾಣದೆ ಹಾಗೇ ಉಳಿದು ಬಿಟ್ಟಿದೆ.

ಅಶೋಕ ಶಿಲಾಶಾಸನ ನೋಡಲು ದೇಶ- ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಇಲ್ಲಿ ಯಾತ್ರಿಕರಿಗೆ ಕುಡಿಯುವ ಶುದ್ಧವಾದ ಒಂದು ಗುಟುಕು ನೀರು ಕೂಡ ಸಿಗುವುದಿಲ್ಲ.

ಇಲ್ಲಿ ವಿಶ್ರಾಂತಿ ಪಡೆಯಲು ಉದ್ಯಾನವೇ ಇಲ್ಲ. ಹೈಟೆಕ್ ಶೌಚಾಲಯ ಇಲ್ಲ. ಸಚಿವರು- ಶಾಸಕರು ಅನೇಕರು ಬಂದು ಭೂಮಿಪೂಜೆ ಮಾಡಿ 
ಹೋದರೂ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ.


ಮಸ್ಕಿ ಶಾಸಕರು ಪ್ರವಾಸೋದ್ಯಮ ಸಚಿವರು, ಮುಖ್ಯಮಂತ್ರಿಗಳಿಗೆ ಗಮನಕ್ಕೆ ತಂದು ಹೈಟೆಕ್ ಉದ್ಯಾನವನ ನಿರ್ಮಿಸಿ  ಶುದ್ಧವಾದ ಕುಡಿಯುವ ನೀರು ಹೈ ಟೆಕ್ ಶೌಚಾಲಯ,ಯಾತ್ರಿಕರಿಗೆ ಯಾತ್ರಿ ನಿವಾಸ್ 
ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.

ಪುರಸಭೆ ಅಧಿಕಾರಿಗಳು ಯಾವುದೇ ಅನುದಾನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಿಲ್ಲ. ಸರಕಾರ ಸಾವಿರಾರು ಕೋಟಿ ಅನುದಾನ ಬರುತ್ತದೆ. ಆದರೆ ಇತಿಹಾಸ ಇತಿಹಾಸ ಇತಿಹಾಸ ಪುಟದಲ್ಲಿ ಮಸ್ಕಿ ಅಶೋಕ ಶಿಲಾಶಾಸನ ಅಭಿವೃದ್ಧಿ ಮಾತ್ರ ಕಂಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು