12:36 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ನಾಗಮಂಗಲದಲ್ಲಿ ಸಂಭ್ರಮದ ಮಹರ್ಷಿ ಭಗೀರಥ ಜಯಂತೋತ್ಸವ

08/05/2022, 20:27

ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ

info.reporterkarnataka@gmail.com

ಮಹರ್ಷಿ ಭಗೀರಥ ರವರ ಮನುಕುಲದ ಕಥೆ ಇಂದಿಗೂ ಇತಿಹಾಸದಲ್ಲಿ ಮತ್ತೆ ಮತ್ತೆ ನೆನಪಿನಲ್ಲಿ ಉಳಿಯುತ್ತದೆ. ಮನುಕುಲದ ಮಾನವತಾವಾದಿಯಾಗಿ ಮನೆಮಾತಾಗಿರುವ ಭಗೀರಥ ರನ್ನು ನೆನಪಿಸುವುದು ನಮ್ಮ ಕರ್ತವ್ಯವೆಂದು ಶಾಸಕ ಸುರೇಶ್ ಗೌಡ ಹೇಳಿದರು.

ಅವರಿಂದು ನಾಗಮಂಗಲ ಮಿನಿವಿಧಾನ ಸೌಧದಲ್ಲಿ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಮಹರ್ಷಿ ಭಗೀರಥ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಅವರು ಉದ್ಘಾಟಿಸಿದರು.

ಭಗೀರಥ ಮಹರ್ಷಿಗಳು ಭೂಮಿಗೆ ಗಂಗೆಯನ್ನು ತರಲು ಮಾಡಿದ ಪ್ರಯತ್ನ ಅಡೆತಡೆಗಳನ್ನು ನಿಭಾಯಿಸಲು ಮಾಡಿದ ಶ್ರಮವನ್ನು ಸ್ಮರಿಸಿದರು.

ಅಂದು ಭಗೀರಥ ನೀರು ತರಲು ಮಾಡಿದ ಶ್ರಮ ಇಂದೂ ಸಹ ನಾವು ನೀರಿಗಾಗಿ ಹೋರಾಡುತ್ತಿದ್ದೇವೆ ಎಂದರು.

ಸಮಾಜದ ಸಮುದಾಯದ ಬಂಧುಗಳು ಸರ್ಕಾರದ ಸೌಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಈ ಸಂದರ್ಭದಲ್ಲಿ ತಿಳಿಸಿದರು.

ಸಮಾರಂಭದಲ್ಲಿ ಉಪ್ಪಾರ ಸಮಾಜದ ಹಾಗೂ ಸಂಘಟನೆಗಳ ಮುಖಂಡರು ಬಾಗವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್, ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಉಪ್ಪಾರ ಸಮಾಜದ ಸಾಧಕರಿಗೆ ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು