3:00 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ನಾಗಮಂಗಲದಲ್ಲಿ ಸಂಭ್ರಮದ ಮಹರ್ಷಿ ಭಗೀರಥ ಜಯಂತೋತ್ಸವ

08/05/2022, 20:27

ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ

info.reporterkarnataka@gmail.com

ಮಹರ್ಷಿ ಭಗೀರಥ ರವರ ಮನುಕುಲದ ಕಥೆ ಇಂದಿಗೂ ಇತಿಹಾಸದಲ್ಲಿ ಮತ್ತೆ ಮತ್ತೆ ನೆನಪಿನಲ್ಲಿ ಉಳಿಯುತ್ತದೆ. ಮನುಕುಲದ ಮಾನವತಾವಾದಿಯಾಗಿ ಮನೆಮಾತಾಗಿರುವ ಭಗೀರಥ ರನ್ನು ನೆನಪಿಸುವುದು ನಮ್ಮ ಕರ್ತವ್ಯವೆಂದು ಶಾಸಕ ಸುರೇಶ್ ಗೌಡ ಹೇಳಿದರು.

ಅವರಿಂದು ನಾಗಮಂಗಲ ಮಿನಿವಿಧಾನ ಸೌಧದಲ್ಲಿ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಮಹರ್ಷಿ ಭಗೀರಥ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಅವರು ಉದ್ಘಾಟಿಸಿದರು.

ಭಗೀರಥ ಮಹರ್ಷಿಗಳು ಭೂಮಿಗೆ ಗಂಗೆಯನ್ನು ತರಲು ಮಾಡಿದ ಪ್ರಯತ್ನ ಅಡೆತಡೆಗಳನ್ನು ನಿಭಾಯಿಸಲು ಮಾಡಿದ ಶ್ರಮವನ್ನು ಸ್ಮರಿಸಿದರು.

ಅಂದು ಭಗೀರಥ ನೀರು ತರಲು ಮಾಡಿದ ಶ್ರಮ ಇಂದೂ ಸಹ ನಾವು ನೀರಿಗಾಗಿ ಹೋರಾಡುತ್ತಿದ್ದೇವೆ ಎಂದರು.

ಸಮಾಜದ ಸಮುದಾಯದ ಬಂಧುಗಳು ಸರ್ಕಾರದ ಸೌಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಈ ಸಂದರ್ಭದಲ್ಲಿ ತಿಳಿಸಿದರು.

ಸಮಾರಂಭದಲ್ಲಿ ಉಪ್ಪಾರ ಸಮಾಜದ ಹಾಗೂ ಸಂಘಟನೆಗಳ ಮುಖಂಡರು ಬಾಗವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್, ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಉಪ್ಪಾರ ಸಮಾಜದ ಸಾಧಕರಿಗೆ ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು