7:02 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಕ್ಕಿ ಕಾ ಮಕ್ಕಿಯಂತೆ ಇರಬೇಡಿ: ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ‌ ಖಡಕ್ ವಾರ್ನಿಂಗ್

08/05/2022, 23:36

ಬೆಂಗಳೂರು(reporterkarnataka.com): ಜಿಲ್ಲಾಧಿಕಾರಿಗಳೇ ಸದಾ ಗಡಿಯಾರದತ್ತಲೇ ಗಮನವಿಡಬೇಡಿ, ಮನಸ್ಸಿಟ್ಟು‌ ಕೆಲಸ ಮಾಡಿ._ ಮಕ್ಕಿ ಕಾ ಮಕ್ಕಿಯಂತೆ ಇರಬೇಡಿ. ಇಂತಹ ಧೋರಣೆಯಿಂದ ಯಾವುದೇ ಪ್ರಯೋಜನವಾಗದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಖಡಕ್ ಆಗಿ ಹೇಳಿದ್ದಾರೆ.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಭಾನುವಾರ ಕರೆದಿದ್ದ ಡಿಸಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಐದು ವರ್ಷಗಳ ಅವಧಿಯ ಚುನಾಯಿತ ಸರ್ಕಾರದ ಕೊನೆಯ ವರ್ಷವಿದು. ಜಿಲ್ಲಾ ಹಂತದಲ್ಲಿ ಡಿಸಿ, ಸಿಇಒಗಳು ಸರಿಯಾದ ರೀತಿಯಲ್ಲಿ ಕೆಲಸ ಮಾಡಿದರೆ ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯಗಳು ರೂಪುಗೊಳ್ಳುತ್ತವೆ._ ಅದಕ್ಕಿಂತಲೂ ಮುಖ್ಯವಾಗಿ ದೀನ-ದಲಿತರು, ಜನಸಾಮಾನ್ಯರ ಅಹವಾಲಿಗೆ ಸ್ಪಂದನೆ, ಜನಪರ ಯೋಜನೆಗಳ ಲಾಭ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪಿಸಬೇಕು ಎಂದು ತಾಕೀತು ಮಾಡಿದರು.

ಗ್ರಾಮ ಒನ್ ಯೋಜನೆ ಅನುಷ್ಠಾನ ವಿಳಂಬವಾಗುತ್ತಿದೆ‌ . ಸಕಾಲ ಯೋಜನೆ ಬಗ್ಗೆ ಉದಾಸೀನತೆ ಎದ್ದು‌ಕಾಣುತ್ತಿದೆ. ಕೆಳ ಹಂತದ ಅಧಿಕಾರಿಗಳು ನೋಡಿಲ್ಲ, ಮಾಡಿಲ್ಲ ಎಂಬ ಸಬೂಬು ಕೇಳುವುದಿಲ್ಲ. ಸಮಯದ ಪರಿವೆಯಿಲ್ಲದೆ ಕೆಲಸ ಮಾಡಿ, ನಿಮಗಾಗದಿದ್ದರೆ ನಿಮ್ಮ ಜಾಗಕ್ಕೆ ಮತ್ತೊಬ್ಬರು ಬರುತ್ತಾರೆ ಹುಷಾರ್ ಎಂದು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು