1:14 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

‘ಸಂಚಾರಿ’ ಗೆ ಕೊನೆಯ ಸಲಾಂ: ಮಿಂಚಿ ಮರೆಯಾದ  ಅದ್ಬುತ ನಟ ವಿಜಯ್ ಹುಟ್ಟೂರು ಪಂಚಮಹಳ್ಳಿಯಲ್ಲಿ ಲೀನ

15/06/2021, 16:02

ಶ್ರದ್ಧಾ ಎಸ್. ಪಾಟೀಲ್ ಹುಳಿಮಾವು

info.reporterkarnataka@gmail.com

ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಮಹಾನ್ ಕನಸುಗಾರ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಅವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಪಂಚಮಹಳ್ಳಿಯಲ್ಲಿ ಮಂಗಳವಾರ ಸಕಲ ಗೌರವದೊಂದಿಗೆ ನಡೆಯಿತು.

ವಿಜಯ್ ಅವರ ಪ್ರಾಣ ಸ್ನೇಹಿತ ರಘು ಅವರ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ವೀರಶೈವ ಲಿಂಗಾಯಿತ ಸಂಪ್ರದಾಯದ ಪ್ರಕಾರ ವಿಜಯ ಅವರ ಸಮಾಧಿ ಮಾಡಲಾಯಿತು. ಈ ಸಂದರ್ಭದಲ್ಲಿ ವಿಜಯ್ ಅವರ ಕುಟುಂಬ, ಬಂಧು ಮಿತ್ರರು ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತು. ನೆರೆದವರ ಕಣ್ಣಾಲಿಗಳು ಕೂಡ ತೇವಗೊಂಡಿತು.

ಮಾಜಿ ಶಾಸಕ ವೈ.ಎಸ್. ವಿ.ದತ್ತಾ ಎಲ್ಲ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಚಿತ್ರ ನಟರಾದ ನೀನಾಸಂ ಸತೀಶ್, ಡಾಲಿ ಧನಂಜಯ ಮುಂತಾದವರು ಉಪಸ್ಥಿತರಿದ್ದರು.


ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದ ಪಾರ್ಥಿವ ಶರೀರವನ್ನು ನಂತರ ಅಂಬುಲೆನ್ಸ್ ಮೂಲಕ ಪಂಚಮಹಳ್ಳಿಗೆ ಕೊಂಡೊಯ್ಯಲಾಯಿತು.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಸಂಚಾರಿ ವಿಜಯ್ ತೀವ್ರವಾಗಿ ಗಾಯಗೊಂಡಿದ್ದರು. ತಲೆಗೆ ಬಿದ್ದ ಬಲವಾದ ಏಟಿನಿಂದ ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿತ್ತು.ತಕ್ಷಣ ಅವರಿಗೆ ಅಪೊಲೋ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ಶಸ್ತ್ರ ಚಿಕಿತ್ಸೆ ನಡೆದು 10 ತಾಸು ಕಳೆದರೂ ವಿಜಯ್ ಚಿಕಿತ್ಸೆಗೆ ಸ್ಪಂದಿಸಿಲ್ಲ. ನಂತರ ವೈದ್ಯರು ಬ್ರೈನ್ ಡೆಡ್ ಅಂತ ಘೋಷಿಸಿದರು. ಈ ನಡುವೆ ವಿಜಯ್ ಅವರ ಅಂಗಾಂಗ ದಾನ ಪ್ರಕ್ರಿಯೆ ನಡೆಯಿತು. ಸಾವಿನಲ್ಲೂ ವಿಜಯ್ ಸಾರ್ಥಕತೆ ಕಂಡರು. ಜೀವ ಸಾರ್ಥಕ್ ಫೌಂಡೇಶನ್ ಮೂಲಕ ಅವರ ಅಂಗಾಂಗ ದಾನ ಪ್ರಕ್ರಿಯೆ ನಡೆಯಿತು.

ಸಂಚಾರಿ ವಿಜಯ್ ಅವರು ‘ರಂಗಪ್ಪ ಹೋಗಿಬಿಟ್ನಾ’ ಸಿನಿಮಾದ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. ‘ನಾನು ಅವನಲ್ಲ ಅವಳು’ ಚಿತ್ರದ ಮೂಲಕ ಪ್ರಸಿದ್ಧರಾಗಿದ್ದರು. ಸುಮಾರು 24 ಸಿನಿಮಾಗಳಲ್ಲಿ ಅವರು ನಟಿಸಿದ್ದರು. ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಇವತ್ತು ಅವರ ‘ತಲೆದಂಡ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ವಿಜಯ್ ಅವರು ಬುದ್ದಿಮಾಂದ್ಯನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು