1:49 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಡಿಕೇರಿ: ಸಂಬಂಧಿಕರ ಮನೆಗೆ ಬಂದ 7ನೇ ತರಗತಿ ವಿದ್ಯಾರ್ಥಿ ನೀರುಪಾಲು

09/05/2022, 09:12

ಮಡಿಕೇರಿ(reporterkarnataka.com):
ಈದುಲ್ ಫಿತ್ರ್ ಹಬ್ಬದ ಹಿನ್ನೆಲೆಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ಬಾಲಕನೋರ್ವ ನೀರು ಪಾಲಾದ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ.

ನಾಸಿರ್ ಪಾಷ ಹಾಗೂ ಪಝೀಯಾ ಭಾನು ಅವರ ಪುತ್ರ ಫರ್ಹಾನ್ (12) ಮೃತಪಟ್ಟ ಬಾಲಕ. 7ನೇ ತರಗತಿಯಲ್ಲಿ ಕಲಿಯುತ್ತಿದ್ದ  ಫರ್ಹಾನ್, ರಂಝಾನ್ ಹಬ್ಬದ ಹಿನ್ನೆಲೆಯಲ್ಲಿ ಬೈಲ್ ಕೊಪ್ಪದಿಂದ ಶನಿವಾರಸಂತೆಯಲ್ಲಿರುವ  ಅಜ್ಜ, ಅಜ್ಜಿಯ ಮನೆಗೆ ಬಂದಿದ್ದ.

ಶನಿವಾರಸಂತೆಯಲ್ಲಿ  ಕಲ್ಲಂಗಡಿ ವ್ಯಾಪಾರ ಮಾಡುತ್ತಿದ್ದ ಮಾವನ ಅಂಗಡಿಯಲ್ಲಿ ಸಂಜೆಯವರೆಗೆ ಇದ್ದ ಪರ್ಹಾನ್, ಸಂಜೆ  5 ಗಂಟೆ ಸುಮಾರಿಗೆ ಮಾವನ ಮಗನೊಂದಿಗೆ ಶನಿವಾರಸಂತೆಯ ಹೆಮ್ಮನೆಯಲ್ಲಿರುವ  ಹೊಳೆಯಲ್ಲಿ ಈಜಲು ತೆರಳಿದ್ದಾನೆ.ಹೊಳೆಯ ಬದಿಯ ಕಲ್ಲಿನಲ್ಲಿ ಪಾಚಿ ಕಟ್ಟಿದ್ದರಿಂದ ಕಾಲು ಜಾರಿ ಫರ್ಹಾನ್ ನೀರಿಗೆ ಬಿದ್ದಿದ್ದಾನೆ. ಎಷ್ಟೇ ಹೊತ್ತಾದರೂ ನೀರಿನಿಂದ ಮೇಲೆ ಬಾರದ ಹಿನ್ನೆಲೆಯಲ್ಲಿ ಮಾವನ ಮಗ ಸ್ಥಳೀಯರಿಗೆ ವಿಷಯ ತಿಳಿಸಿದ್ದಾನೆ. ರಾತ್ರಿ ಪೂರ್ತಿ ಹುಡುಕಾಟ ನಡೆಸಿದರೂ ಮೃತದೇಹ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗಿನ ಜಾವ 2 ಗಂಟೆ ಸುಮಾರಿಗೆ ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು