2:43 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಮಡಿಕೇರಿ: ಸಂಬಂಧಿಕರ ಮನೆಗೆ ಬಂದ 7ನೇ ತರಗತಿ ವಿದ್ಯಾರ್ಥಿ ನೀರುಪಾಲು

09/05/2022, 09:12

ಮಡಿಕೇರಿ(reporterkarnataka.com):
ಈದುಲ್ ಫಿತ್ರ್ ಹಬ್ಬದ ಹಿನ್ನೆಲೆಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ಬಾಲಕನೋರ್ವ ನೀರು ಪಾಲಾದ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ.

ನಾಸಿರ್ ಪಾಷ ಹಾಗೂ ಪಝೀಯಾ ಭಾನು ಅವರ ಪುತ್ರ ಫರ್ಹಾನ್ (12) ಮೃತಪಟ್ಟ ಬಾಲಕ. 7ನೇ ತರಗತಿಯಲ್ಲಿ ಕಲಿಯುತ್ತಿದ್ದ  ಫರ್ಹಾನ್, ರಂಝಾನ್ ಹಬ್ಬದ ಹಿನ್ನೆಲೆಯಲ್ಲಿ ಬೈಲ್ ಕೊಪ್ಪದಿಂದ ಶನಿವಾರಸಂತೆಯಲ್ಲಿರುವ  ಅಜ್ಜ, ಅಜ್ಜಿಯ ಮನೆಗೆ ಬಂದಿದ್ದ.

ಶನಿವಾರಸಂತೆಯಲ್ಲಿ  ಕಲ್ಲಂಗಡಿ ವ್ಯಾಪಾರ ಮಾಡುತ್ತಿದ್ದ ಮಾವನ ಅಂಗಡಿಯಲ್ಲಿ ಸಂಜೆಯವರೆಗೆ ಇದ್ದ ಪರ್ಹಾನ್, ಸಂಜೆ  5 ಗಂಟೆ ಸುಮಾರಿಗೆ ಮಾವನ ಮಗನೊಂದಿಗೆ ಶನಿವಾರಸಂತೆಯ ಹೆಮ್ಮನೆಯಲ್ಲಿರುವ  ಹೊಳೆಯಲ್ಲಿ ಈಜಲು ತೆರಳಿದ್ದಾನೆ.ಹೊಳೆಯ ಬದಿಯ ಕಲ್ಲಿನಲ್ಲಿ ಪಾಚಿ ಕಟ್ಟಿದ್ದರಿಂದ ಕಾಲು ಜಾರಿ ಫರ್ಹಾನ್ ನೀರಿಗೆ ಬಿದ್ದಿದ್ದಾನೆ. ಎಷ್ಟೇ ಹೊತ್ತಾದರೂ ನೀರಿನಿಂದ ಮೇಲೆ ಬಾರದ ಹಿನ್ನೆಲೆಯಲ್ಲಿ ಮಾವನ ಮಗ ಸ್ಥಳೀಯರಿಗೆ ವಿಷಯ ತಿಳಿಸಿದ್ದಾನೆ. ರಾತ್ರಿ ಪೂರ್ತಿ ಹುಡುಕಾಟ ನಡೆಸಿದರೂ ಮೃತದೇಹ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗಿನ ಜಾವ 2 ಗಂಟೆ ಸುಮಾರಿಗೆ ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು