6:26 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಾಣೂರು: ಅಡುಗೆ ಮಾಡುವಾಗ ಬೆಂಕಿ ಆಕಸ್ಮಿಕ‌;  ಆಸ್ಪತ್ರೆಯಲ್ಲಿ ಗಾಯಾಳು ವೃದ್ಧೆ ಸಾವು

09/05/2022, 15:20

ಕಾರ್ಕಳ(reporterkarnataka.com):
ಓಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ‌ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ. 

ಸಾಣೂರು ಗ್ರಾಮದ ನಿವಾಸಿ 71 ವರ್ಷದ ಸುಮತಿ ಶೆಟ್ಟಿ ಮೃತ ದುರ್ದೈವಿ. ಇವರು ಏ.4ರಂದು ಬೆಳಿಗ್ಗೆ ಅಡುಗೆ ಮನೆಯಲ್ಲಿ ಕಟ್ಟಿಗೆ ಓಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಆಕಸ್ಮಿಕವಾಗಿ ಸೀರೆಯ ಸೆರಗಿಗೆ ಬೆಂಕಿ ತಗಲಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡವರನ್ನು ಆಳ್ವಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿ ಮನೆಗೆ ಬಂದಿದ್ದರು. ಕೆಲವು ದಿನಗಳ ಬಳಿಕ ಗಾಯ ಮತ್ತೆ ಉಲ್ಬಣಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರ್ಕಾರಿ ಆಸ್ಪತ್ರೆ ಹಾಗೂ ಉಡುಪಿ ಅಜ್ಜರಕಾಡಿನ ಆಸ್ಪತ್ರೆ ದಾಖಲಿಸಲಾಗಿತ್ತು. ಆ ನಂತರ ಏ.30ರಂದು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಮತಿ‌ ಶೆಟ್ಟಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೇ.7ರಂದು ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು