12:16 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಾವಲಿಗಳ ಸಂತಾನಾಭಿವೃದ್ಧಿ: ಕೇರಳದಲ್ಲಿ ನಿಫಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡ ಸರಕಾರ

09/05/2022, 16:07

ತಿರುವನಂತಪುರ(reporterkarnataka.com): ಕೇರಳದಲ್ಲಿ ನಿಫಾ ವೈರಸ್ ಹರಡದಂತೆ ರಾಜ್ಯ ಸರ್ಕಾರವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಬಾವಲಿಗಳ ಸಂತಾನಾಭಿವೃದ್ಧಿಯ ಅವಧಿ ಆರಂಭವಾಗಿದ್ದು, ಈ ವೇಳೆ ರೋಗ ಬಾಧಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಇದರ ಅಂಗವಾಗಿ ಮೇ 12ರಂದು ಅರಣ್ಯ ಮತ್ತು ಪಶುಸಂಗೋಪನಾ ಇಲಾಖೆಗಳ ಸಹಯೋಗದಲ್ಲಿ ಎಲ್ಲಾ ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ನಿಫಾ ವೈರಸ್, ಬಾವಲಿಗಳ ಜೊಲ್ಲಿನಿಂದ ಸಂತಾನೋತ್ಪತ್ತಿ ಅವಧಿಯಲ್ಲಿ ಹರಡುತ್ತದೆ. ಹಿಂದಿನ ವರ್ಷ ಈ ಸಮಯಕ್ಕೆ ಕೇರಳದಲ್ಲಿ ಏಕಾಏಕಿ ನಿಫಾ ವೈರಸ್ ಸೋಂಕು ವರದಿಯಾಗಿತ್ತು. ಆದ್ದರಿಂದ ಈ ಬಾರಿ ಅಂತಹ ಆರೋಗ್ಯ ಸಮಸ್ಯೆ ಮರುಕಳಿಸದಂತೆ ಜನರು ಎಚ್ಚರಿಕೆ ವಹಿಸಬೇಕು. ಇದಕ್ಕಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕೆಂದು ಅರೋಗ್ಯ ಇಲಾಖೆಯು ಜನರಿಗೆ ತಿಳಿಸಿದೆ. ಈ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಛಾಯಾಚಿತ್ರ ಪ್ರದರ್ಶನವನ್ನೂ ಆಯೋಜಿಸಲು ನಿರ್ಧರಿಸಲಾಗಿದೆ.

ನಿಫಾ ರೋಗ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ಬರುವವರ ಮೇಲೆ ಗರಿಷ್ಠ ನಿಗಾ ವಹಿಸಿ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿರುವುದಾಗಿ ಆರೋಗ್ಯ ಇಲಾಖೆಯು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು