6:41 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಬಾವಲಿಗಳ ಸಂತಾನಾಭಿವೃದ್ಧಿ: ಕೇರಳದಲ್ಲಿ ನಿಫಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡ ಸರಕಾರ

09/05/2022, 16:07

ತಿರುವನಂತಪುರ(reporterkarnataka.com): ಕೇರಳದಲ್ಲಿ ನಿಫಾ ವೈರಸ್ ಹರಡದಂತೆ ರಾಜ್ಯ ಸರ್ಕಾರವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಬಾವಲಿಗಳ ಸಂತಾನಾಭಿವೃದ್ಧಿಯ ಅವಧಿ ಆರಂಭವಾಗಿದ್ದು, ಈ ವೇಳೆ ರೋಗ ಬಾಧಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಇದರ ಅಂಗವಾಗಿ ಮೇ 12ರಂದು ಅರಣ್ಯ ಮತ್ತು ಪಶುಸಂಗೋಪನಾ ಇಲಾಖೆಗಳ ಸಹಯೋಗದಲ್ಲಿ ಎಲ್ಲಾ ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ನಿಫಾ ವೈರಸ್, ಬಾವಲಿಗಳ ಜೊಲ್ಲಿನಿಂದ ಸಂತಾನೋತ್ಪತ್ತಿ ಅವಧಿಯಲ್ಲಿ ಹರಡುತ್ತದೆ. ಹಿಂದಿನ ವರ್ಷ ಈ ಸಮಯಕ್ಕೆ ಕೇರಳದಲ್ಲಿ ಏಕಾಏಕಿ ನಿಫಾ ವೈರಸ್ ಸೋಂಕು ವರದಿಯಾಗಿತ್ತು. ಆದ್ದರಿಂದ ಈ ಬಾರಿ ಅಂತಹ ಆರೋಗ್ಯ ಸಮಸ್ಯೆ ಮರುಕಳಿಸದಂತೆ ಜನರು ಎಚ್ಚರಿಕೆ ವಹಿಸಬೇಕು. ಇದಕ್ಕಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕೆಂದು ಅರೋಗ್ಯ ಇಲಾಖೆಯು ಜನರಿಗೆ ತಿಳಿಸಿದೆ. ಈ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಛಾಯಾಚಿತ್ರ ಪ್ರದರ್ಶನವನ್ನೂ ಆಯೋಜಿಸಲು ನಿರ್ಧರಿಸಲಾಗಿದೆ.

ನಿಫಾ ರೋಗ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ಬರುವವರ ಮೇಲೆ ಗರಿಷ್ಠ ನಿಗಾ ವಹಿಸಿ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿರುವುದಾಗಿ ಆರೋಗ್ಯ ಇಲಾಖೆಯು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು