12:10 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬಾವಲಿಗಳ ಸಂತಾನಾಭಿವೃದ್ಧಿ: ಕೇರಳದಲ್ಲಿ ನಿಫಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡ ಸರಕಾರ

09/05/2022, 16:07

ತಿರುವನಂತಪುರ(reporterkarnataka.com): ಕೇರಳದಲ್ಲಿ ನಿಫಾ ವೈರಸ್ ಹರಡದಂತೆ ರಾಜ್ಯ ಸರ್ಕಾರವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಬಾವಲಿಗಳ ಸಂತಾನಾಭಿವೃದ್ಧಿಯ ಅವಧಿ ಆರಂಭವಾಗಿದ್ದು, ಈ ವೇಳೆ ರೋಗ ಬಾಧಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಇದರ ಅಂಗವಾಗಿ ಮೇ 12ರಂದು ಅರಣ್ಯ ಮತ್ತು ಪಶುಸಂಗೋಪನಾ ಇಲಾಖೆಗಳ ಸಹಯೋಗದಲ್ಲಿ ಎಲ್ಲಾ ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ನಿಫಾ ವೈರಸ್, ಬಾವಲಿಗಳ ಜೊಲ್ಲಿನಿಂದ ಸಂತಾನೋತ್ಪತ್ತಿ ಅವಧಿಯಲ್ಲಿ ಹರಡುತ್ತದೆ. ಹಿಂದಿನ ವರ್ಷ ಈ ಸಮಯಕ್ಕೆ ಕೇರಳದಲ್ಲಿ ಏಕಾಏಕಿ ನಿಫಾ ವೈರಸ್ ಸೋಂಕು ವರದಿಯಾಗಿತ್ತು. ಆದ್ದರಿಂದ ಈ ಬಾರಿ ಅಂತಹ ಆರೋಗ್ಯ ಸಮಸ್ಯೆ ಮರುಕಳಿಸದಂತೆ ಜನರು ಎಚ್ಚರಿಕೆ ವಹಿಸಬೇಕು. ಇದಕ್ಕಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕೆಂದು ಅರೋಗ್ಯ ಇಲಾಖೆಯು ಜನರಿಗೆ ತಿಳಿಸಿದೆ. ಈ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಛಾಯಾಚಿತ್ರ ಪ್ರದರ್ಶನವನ್ನೂ ಆಯೋಜಿಸಲು ನಿರ್ಧರಿಸಲಾಗಿದೆ.

ನಿಫಾ ರೋಗ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ಬರುವವರ ಮೇಲೆ ಗರಿಷ್ಠ ನಿಗಾ ವಹಿಸಿ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿರುವುದಾಗಿ ಆರೋಗ್ಯ ಇಲಾಖೆಯು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು